ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 29 ಜೂನ್ 2020 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿದ್ಯಾರ್ಥಿಗಳಿಗೆ ಸದ್ಯದಲ್ಲೇ ಶುಭ ಸುದ್ದಿ ಕಾದಿದೆ. ಅವಿವಾಹಿತರು ಶೀಘ್ರ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಆರ್ಥಿಕವಾಗಿ ಸಮಸ್ಯೆಗಳು ಬಂದರೂ ಸುಧಾರಣೆಗೆ ಹಾದಿಗಳು ಗೋಚರವಾಗಲಿದೆ. ದೈಹಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ವೃಷಭ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರದೇ ಬೇಸರವಾಗಬಹುದು. ಆದರೆ ನಿರಾಸೆ ಬೇಡ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗಲಿದೆ.

ಮಿಥುನ: ಉದ್ಯೋಗಸ್ಥರಿಗೆ ಉದ್ಯೋಗ ಬದಲಾವಣೆಯ ಅವಕಾಶಗಳು ಒದಗಿಬರಲಿವೆ. ವ್ಯಾಪಾರಿಗಳು ಸ್ವಲ್ಪ ಮಟ್ಟಿಗಿನ ಚೇತರಿಕೆ ಹೊಂದಲಿದ್ದಾರೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ಸಂಗಾತಿಗೆ ಇಷ್ಟವಾದ ವಸ್ತು ಖರೀದಿ ಮಾಡಿಕೊಡಲಿದ್ದೀರಿ.

ಕರ್ಕಟಕ: ನೀರಿಗೆ ಸಂಬಂಧಪಟ್ಟ ಸಮಸ್ಯೆಗಳು ಕಂಡುಬಂದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆಯಿರಲಿದೆ. ರಾಜಕೀಯ ವರ್ಗದವರಿಗೆ ಕೀರ್ತಿ ಸಂಪಾದಿಸುವ ಯೋಗ.

ಸಿಂಹ: ಹಣ ಗಳಿಕೆಗೆ ನಾನಾ ರೀತಿಯ ದಾರಿಗಳು ಗೋಚರವಾಗಲಿದೆ. ಆದರೆ ಹೊಸ ಯೋಜನೆಗಳಿಗೆ ಕೈ ಹಾಕುವಾಗ ಯೋಚಿಸಿ ಹೆಜ್ಜೆಯಿಡುವುದು ಅಗತ್ಯ. ಹಿರಿಯರಿಗೆ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವ ಯೋಗವಿದೆ. ನೂತನ ದಂಪತಿಗಳಿಗೆ ಶುಭ ದಿನ.

ಕನ್ಯಾ: ಅನವಶ್ಯಕ ಮಾತಿನಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಅಡೆತಡೆಗಳು ತೋರಿಬಂದೀತು. ನಿಮಗೆ ಬರಬೇಕಿದ್ದ ಯಶಸ್ಸು ಬೇರೆಯವರ ಪಾಲಾಯಿತು ಎಂಬ ಬೇಸರ ಕಾಡಬಹುದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಪ್ರೀತಿ ಪಾತ್ರರೊಂದಿಗೆ ಹೊರಗಡೆ ಸುತ್ತಾಡುವುದರಿಂದ ಮನಸ್ಸಿಗೆ ಸಂತಸವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಅಧಿಕವಾದೀತು. ಕೃಷಿಕರಿಗೆ ವ್ಯವಹಾರಕ್ಕೆ ಪೂರಕ ವಾತಾವರಣ ಒದಗಿಬರಲಿದೆ. ಕಿರು ಸಂಚಾರ ಮಾಡಬೇಕಾಗಬಹುದು.

ವೃಶ್ಚಿಕ: ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗುವುದರಿಂದ ಚಿಂತೆ ಬೇಡ. ಉದ್ಯೋಗ ಕ್ಷೇತ್ರದಲ್ಲಿ ವಿನಾಕಾರಣ ಹೊಗಳುವವರಿಂದ ದೂರವಿರುವುದೇ ಉತ್ತಮ. ನೂತನ ಗೃಹ ನಿರ್ಮಾಣಕ್ಕೆ ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಚಿಂತೆ ಬೇಡ.

ಧನು: ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಆದರೆ ಅನಿರೀಕ್ಷಿತವಾಗಿ ಆಪ್ತರ ಭೇಟಿಯಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಸ್ಥಾನ ಮಾನ ಉತ್ತಮಗೊಳ್ಳಲಿದೆ. ಪರರ ನಿಂದನೆ ಮಾಡಬೇಡಿ.

ಮಕರ: ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಸುಧಾರಣೆಯಾಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಾಗದು. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಕುಂಭ: ನೀವು ಎಷ್ಟೋ ದಿನದಿಂದ ಭೇಟಿಯಾಗಬೇಕೆಂದುಕೊಂಡಿದ್ದ ವ್ಯಕ್ತಿಯನ್ನು ಅನಿರೀಕ್ಷಿತವಾಗಿ ಭೇಟಿಯಾಗುವ ಅವಕಾಶ ಸಿಗಲಿದೆ. ಅವಿವಾಹಿತರಿಗೆ ಯೋಗ್ಯ ವಿವಾಹ ಪ್ರಸ್ತಾಪಗಳು ಬರಲಿವೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ.

ಮೀನ: ಕೆಲಸ ಕಾರ್ಯ ನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ವಾಹನ ಖರೀದಿ ಯೋಗವಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಗೃಹಿಣಿಯರಿಗೆ ಗೃಹ ಕೃತ್ಯಗಳಿಂದ ಬಿಡುವು ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ