ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 30 ಜೂನ್ 2020 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಒಂದು ಸಮಸ್ಯೆ ತೀರಿತು ಎಂದುಕೊಳ್ಳುವಾಗ ಹೊಸ ಸಮಸ್ಯೆಗಳು ಎದುರಾಗಿ ತಲೆನೋವು ತರಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಿ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ವಿದ್ಯಾರ್ಥಿಗಳಲ್ಲಿ ಉತ್ಸಾಹದ ಕೊರತೆ ಕಂಡುಬರಲಿದೆ. ಅನಿವಾರ್ಯವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರ ಮಾತಿಗೆ ಕಿವಿಗೊಡಿ.

ಮಿಥುನ: ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿದ್ದು, ಹೊಸ ಯೋಜನೆಗೆ ಕೈ ಹಾಕಲಿದ್ದೀರಿ. ದಾಯಾದಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ. ವಿನಾಕಾರಣ ಮಾತು, ವಿವಾದ ಬೇಡ. ವೃತ್ತಿರಂಗದಲ್ಲಿ ನಿಮ್ಮ ಬಗ್ಗೆ ಇದ್ದ ತಪ್ಪು ಅಭಿಪ್ರಾಯಗಳು ದೂರವಾಗಲಿದೆ.

ಕರ್ಕಟಕ: ನಿರುದ್ಯೋಗಿಗಳಿಗೆ ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ಹಿರಿಯರಿಗೆ ಸಂತೋಷದಾಯಕ ವಾರ್ತೆ ಕೇಳುವ ಯೋಗವಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ತೋರಿಬರುವುದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗಬಹುದು.

ಸಿಂಹ: ವಿದ್ಯಾರ್ಥಿಗಳು ಬಯಸಿದ ಫಲಿತಾಂಶ ಪಡೆಯಲಿದ್ದು, ಪೋಷಕರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ಮಿತ್ರರ ಸಹಕಾರದಿಂದ ನೀವು ಅಂದುಕೊಂಡಿದ್ದ ಕೆಲಸ ನೆರವೇರಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರಲಿದೆ. ಚಿಂತೆ ಬೇಡ.

ಕನ್ಯಾ: ಹಿಂದೆ ಬಂಡವಾಳ ಹೂಡಿಕೆ ಮಾಡಿದ್ದಕ್ಕೆ ಇಂದು ಫಲ ಪಡೆಯಲಿದ್ದೀರಿ. ಸರಕಾರಿ ಲೆಕ್ಕಪತ್ರಗಳನ್ನು ಎಚ್ಚರಿಕೆಯಿಂದ ಸಂರಕ್ಷಿಸಿ. ಕೌಟುಂಬಿಕವಾಗಿ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.

ತುಲಾ: ಸಾಂಸಾರಿಕವಾಗಿ ಹೊಂದಾಣಿಕೆ ಮನೋಭಾವವಿದ್ದರೆ ಸಮಸ್ಯೆಗಳು ಸರಿಹೋಗಲಿವೆ. ಎಲ್ಲವನ್ನೂ ಸಮಚಿತ್ತದಿಂದ ಸರಿದೂಗಿಸಿಕೊಂಡು ಹೋಗುವ ತಾಳ್ಮೆ ಬೇಕು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ವೃಶ್ಚಿಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಶೆಯಾಗಬಹುದು. ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಬಹುದು. ಸಂಗಾತಿಯ ಸಲಹೆಗಳನ್ನು ಪಾಲಿಸಿ. ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಯೋಜನೆ ಹಾಕಿಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಯೋಗ್ಯ ವಯಸ್ಕರು ಶೀಘ್ರದಲ್ಲೇ ವೈವಾಹಿಕ ಸಂಬಂಧ ಕಂಡುಕೊಳ್ಳಲಿದ್ದಾರೆ. ನೂತನ ದಂಪತಿಗಳಿಗೆ ಹೊಂದಾಣಿಕೆ ಕೊರತೆ ಕಂಡುಬರಬಹುದು. ಹಿರಿಯರ ಸಲಹೆಗಳನ್ನು ಪಾಲಿಸಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಇಷ್ಟು ದಿನ ಕಠಿಣವೆನಿಸಿದ್ದ ಕಾರ್ಯಗಳು ಇಂದು ಅನಿರೀಕ್ಷಿತ ರೀತಿಯಲ್ಲಿ ನಡೆದುಹೋಗಲಿವೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಪಡೆಯಲಿದ್ದೀರಿ. ಗೃಹ ಸಂಬಂಧೀ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ವೃತ್ತಿರಂಗದಲ್ಲಿ ಹಲವಾರು ಸಮಸ್ಯೆಗಳು ನಿಮ್ಮ ಮುಂದೆ ಎದುರಾದೀತು. ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಎಷ್ಟೇ ಅಡೆತಡೆಯಿದ್ದರೂ ಕೆಲಸ ಕಾರ್ಯಗಳಲ್ಲಿ ಅಂತಿಮ ಜಯ ನಿಮ್ಮದಾಗಲಿದೆ. ಖರ್ಚು ವೆಚ್ಚಗಳ ಮೇಲೆ ನಿಗಾ ಇರಲಿ.

ಮೀನ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ನಿಮ್ಮನ್ನು ಕಾಡಲಿದ್ದು ಕೆಲಸದಲ್ಲಿ ನಿರುತ್ಸಾಹ ಕಂಡುಬರಬಹುದು. ಬೇಡದ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ಮಹಿಳೆಯರಿಗೆ ಆಕಸ್ಮಿಕ ಧನಲಾಭವಾಗಲಿದೆ. ಶುಭ ಮಂಗಲ ಕಾರ್ಯಗಳು ಅರ್ಧಕ್ಕೇ ನಿಲ್ಲಿಸಬೇಕಾಗಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ