ರಿಷಿ ಕಪೂರ್ ನಿಧನಕ್ಕೆ ಗಣ್ಯರ ಸಂತಾಪ

ಗುರುವಾರ, 30 ಏಪ್ರಿಲ್ 2020 (10:22 IST)
ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ರಿಷಿ ಕಪೂರ್ ಇಂದು ಮುಂಬೈನಲ್ಲಿ ನಿಧನರಾಗಿದ್ದು, ಅವರ ನಿಧನಕ್ಕೆ ಸಿನಿಮಾ, ರಾಜಕೀಯ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

 

ರಿಷಿ ಕಪೂರ್ ನಿಧನದ ಸುದ್ದಿಯನ್ನು ಮೊದಲನೆಯವರಾಗಿ ಟ್ವೀಟ್ ಮಾಡಿದ್ದ ಬಿಗ್ ಬಿ ಅಮಿತಾಭ್ ಬಚ್ಚನ್ ತೀವ್ರ ಆಘಾತ ವ್ಯಕ್ತಪಡಿಸಿದ್ದರು. ಬಿಗ್ ಬಿ ಅಲ್ಲದೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ. ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಟ್ವಿಟರ್ ಮುಖಾಂತರ ಕಂಬನಿ ಮಿಡಿದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ