ಬಡವರ ಆತ್ಮಗೌರವವನ್ನು ಕಾಪಾಡುವಲ್ಲಿ ಸರ್ಕಾರ ಎಡವಿದೆ-ಪಿ.ಚಿದಂಬರಂ ಆರೋಪ

ಸೋಮವಾರ, 20 ಏಪ್ರಿಲ್ 2020 (08:35 IST)

ನವದೆಹಲಿ : ಲಾಕ್ ಡೌನ್  ನಿಂದಾಗಿ ಕೆಲಸ ಕಳೆದುಕೊಂಡು ಹಸಿವಿನಿಂದ ಬಳಲುತ್ತಿರುವ ಬಡವರ ಆತ್ಮಗೌರವವನ್ನು ಕಾಪಾಡುವಲ್ಲಿ ಸರ್ಕಾರ ಎಡವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಆರೋಪಿಸಿದ್ದಾರೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತುಂಬಾ ಜನರ ಬಳಿ ಹಣ ಇಲ್ಲದಂತಾಗಿದೆ. ಅನೇಕರು ಉಚಿತವಾಗಿ ಹಂಚುತ್ತಿರುವ ಊಟಕ್ಕಾಗಿ ಸಾಲು ಗಟ್ಟಿ ನಿಲ್ಲುತ್ತಿದ್ದಾರೆ. ಇಂತವರಿಗೆ ಸರ್ಕಾರ ಹಣ ಹಾಗೂ ಉಚಿತ ಆಹಾರ ನೀಡಬೇಕು. ಕೇವಲ ಹೃದಯವಿಲ್ಲದ ಸರ್ಕಾರ ಮಾತ್ರ ಏನು ಮಾಡದಿರಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

 

ಸರ್ಕಾರ ಪ್ರತಿ ಬಡ ಕುಟುಂಬಕ್ಕೆ ಹಣ ನೀಡುವ ಮೂಲಕ ಜನರನ್ನು ಹಸಿವಿನಿಂದ ಯಾಕೆ ಕಾಪಾಡುತ್ತಿಲ್ಲ. ಅವರ ಗೌರವವನ್ನೇಕೆ ಉಳಿಸುತ್ತಿಲ್ಲ. ಅಲ್ಲದೇ 77 ಮಿಲಿಯನ್ ಟನ್ ಧಾನ್ಯಗಳಿದ್ದು, ಅದರಲ್ಲಿ ಸಣ್ಣ ಪ್ರಮಾಣದಲ್ಲಿ ಸರ್ಕಾರ ಬಡವರಿಗೇಕೆ ಹಂಚುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ