ಕೃಷಿಕರಿಗೆ ಈ ಬಗ್ಗೆ ಅಭಯ ನೀಡಿದ ಸಚಿವ ಎಸ್ ಟಿ ಸೋಮಶೇಖರ್

ಶನಿವಾರ, 18 ಏಪ್ರಿಲ್ 2020 (11:16 IST)
ಬೆಂಗಳೂರು : ಕೊರೊನಾ ವೈರಸ್ ಹರಡುತ್ತಿರುವ ಈ ವೇಳೆ ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆ ಬೇಡ  ಸಚಿವ ಎಸ್ ಟಿ ಸೋಮಶೇಖರ್ ಮನವಿ ಮಾಡಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮೂಹಿಕ ನಮಾಜ್ ಮಾಡುವಂತಿಲ್ಲ. ಮನೆಯಲ್ಲಿಯೇ ನಮಾಜ್ ಮಾಡಬೇಕು. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಎಂದು ಹೇಳಿದ್ದಾರೆ.


ಅಲ್ಲದೇ ಹಣ್ಣು ತರಕಾರಿ ಬೆಳೆಗಾರರಿಗೆ ಭಯಬೇಡ.  ಹಣ್ಣು ತರಕಾರಿ ವಾಹನ ತಡೆಯಬೇಡಿ. ಹಣ್ಣು ತರಕಾರಿ ಬೆಳೆಗಳಿಗೆ ನಷ್ಟ ಪರಿಹಾರ ನೀಡಲು ಸಿಎಂ ಬಿಎಸ್ ವೈ ಭರವಸೆ ನೀಡಿದ್ದಾರೆ. ಕೃಷಿ ಉತ್ಪನ್ನಗಳನ್ನು ಬೇರೆ ರಾಜ್ಯಗಳಿಗೆ  ಸಾಗಿಸಲು ಅನುಮತಿ ನೀಡಲಾಗಿದೆ . ಸರಬರಾಜು ಮಾಡುವ ಲಾರಿ ತಡೆಯಬೇಡಿ ಎಂದು ಎಸ್ ಟಿ ಸೋಮಶೇಖರ್ ಅಭಯ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ