ಟಿ20 ವಿಶ್ವಕಪ್ ಗೆ ರಿಷಬ್ ಪಂತ್: ಸಂಜು ಸ್ಯಾಮ್ಸನ್ ಏನು ತಪ್ಪು ಮಾಡಿದ್ದಾರೆ ಎಂದು ಫ್ಯಾನ್ಸ್ ಆಕ್ರೋಶ

Krishnaveni K

ಬುಧವಾರ, 10 ಏಪ್ರಿಲ್ 2024 (10:18 IST)
Photo Courtesy: Twitter
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಅಂತಿಮ ಬಳಗ ಬಹುತೇಕ ಫೈನಲೈಸ್ ಆಗುತ್ತಿದೆ. ಈ ನಡುವೆ ರಿಷಬ್ ಪಂತ್ ರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತ ಎಂಬ ಸುದ್ದಿ ಓಡಾಡುತ್ತಿದೆ.

ಇದು ಸಂಜು ಸ್ಯಾಮ್ಸನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಐಪಿಎಲ್ ನಲ್ಲಿ ಸಂಜು ಸ್ಯಾಮ್ಸನ್ ನಾಯಕನಾಗಿ ಮತ್ತು ಆಟಗಾರನಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇದುವರೆಗೆ ಸ್ಯಾಮ್ಸನ್ ಗೆ ಟೀಂ ಇಂಡಿಯಾದಲ್ಲಿ ಸರಿಯಾಗಿ ಅವಕಾಶ ಕೊಡದೇ ವಂಚಿಸಲಾಗುತ್ತಿದೆ ಎಂಬುದು ಅವರ ಅಭಿಮಾನಿಗಳ ಆರೋಪ.

ಇದೀಗ ಟಿ20 ವಿಶ್ವಕಪ್ ತಂಡಕ್ಕೂ ಸ್ಯಾಮ್ಸನ್ ಗೆ ಅವಕಾಶ ನೀಡದೇ ಸಾಧಾರಣ ಪ್ರದರ್ಶನ ನೀಡುತ್ತಿರುವ ರಿಷಬ್ ಪಂತ್ ಗೆ ಅವಕಾಶ ನೀಡುತ್ತಿರುವುದು ಅಭಿಮಾನಿಗಳ ಕೆಂಗಣ‍್ಣಿಗೆ ಗುರಿಯಾಗಿದೆ. ಒಂದು ವರ್ಷದ ಬಳಿಕ ಕ್ರಿಕೆಟ್ ಗೆ ಕಮ್ ಬ್ಯಾಕ್ ಮಾಡಿದ ರಿಷಬ್ ಈ ಐಪಿಎಲ್ ನಲ್ಲಿ ಇದುವರೆಗೆ ಹೇಳಿಕೊಳ್ಳುವ ಪ್ರದರ್ಶನ ನೀಡಿಲ್ಲ.

ಹೇಗಿದ್ದರೂ ವಿಕೆಟ್ ಕೀಪರ್ ಆಗಿ ಇಬ್ಬರಿಗೆ ಅವಕಾಶ ನೀಡಬಹುದಾಗಿದೆ. ಹೀಗಿದ್ದಲ್ಲಿ ಕೆಎಲ್ ರಾಹುಲ್, ಜಿತೇಶ್ ಶರ್ಮಾ ಮೊದಲಾದವರ ಬದಲು ರಿಷಬ್ ಪಂತ್ ಜೊತೆಗೆ ಸಂಜು ಸ್ಯಾಮ್ಸನ್ ಗೆ ಎರಡನೇ ವಿಕೆಟ್ ಕೀಪರ್ ಆಗಿ ಅವಕಾಶ ಕೊಡಿ ಎಂಬುದು ಅಭಿಮಾನಿಗಳ ಒತ್ತಾಯ. ಆಯ್ಕೆ ಸಮಿತಿ ಅಂತಿಮವಾಗಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ನೋಡಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ