ರಣಜಿ ಟ್ರೋಫಿ ಕ್ರಿಕೆಟ್: ಬರೋಡ ವಿರುದ್ಧ ಕರ್ನಾಟಕಕ್ಕೆ ಗೆಲುವು

ಶುಕ್ರವಾರ, 14 ಫೆಬ್ರವರಿ 2020 (16:12 IST)
ಬೆಂಗಳೂರು: ರಣಜಿ ಟ್ರೋಫಿ ಪಂದ್ಯದಲ್ಲಿ ಬರೋಡ ವಿರುದ್ಧ 8 ವಿಕೆಟ್ ಗಳ ಗೆಲುವು ಸಾಧಿಸಿದ ಅತಿಥೇಯ ಕರ್ನಾಟಕ ಕ್ವಾರ್ಟರ್ ಫೈನಲ್ ಹಂತಕ್ಕೇರುವ ಹಾದಿ ಸುಗಮಮಾಡಿಕೊಂಡಿದೆ.


ಬರೋಡ ವಿರುದ್ಧ ಮೂರನೇ ದಿನಕ್ಕೇ ಜಯ ಸಾಧಿಸಿರುವುದು ವಿಶೇಷ. ದ್ವಿತೀಯ ಇನಿಂಗ್ಸ್ ನಲ್ಲಿ 149 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಕರ್ನಾಟಕ 2 ವಿಕೆಟ್ ಕಳೆದುಕೊಂಡು 150 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಎರಡೂ ಇನಿಂಗ್ಸ್ ಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಕರುಣ್ ನಾಯರ್ ಪಂದ್ಯ ಶ್ರೇಷ್ಠರಾದರು.

ಈ ಗೆಲುವಿನೊಂದಿಗೆ ಕರ್ನಾಟಕ ಕ್ವಾರ್ಟರ್ ಫೈನಲ್ ಹಂತಕ್ಕೇರಿದೆ. ಫೆಬ್ರವರಿ 21 ರಿಂದ ಕ್ವಾರ್ಟರ್ ಫೈನಲ್ ಪಂದ್ಯ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ