ಮುಖ್ಯಮಂತ್ರಿ ಖುದ್ದಾಗಿ ಭೇಟಿ ಮಾಡಿ 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜಕುಮಾರ್

ಮಂಗಳವಾರ, 31 ಮಾರ್ಚ್ 2020 (16:31 IST)
ಬೆಂಗಳೂರು: ಕೊರೋನಾವೈರಸ್ ಪರಿಹಾರ ಕಾರ್ಯಕ್ಕೆ ನೆರವಾಗಲು ರಾಜ್ಯ ಸರ್ಕಾರದ ಜತೆ ಕೈ ಜೋಡಿಸಿರುವ ನಟ ಪುನೀತ್ ರಾಜಕುಮಾರ್ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.


ಇಂದು ಸಿಎಂ ಯಡಿಯೂರಪ್ಪನವರ ನಿವಾಸಕ್ಕೆ ಖುದ್ದಾಗಿ ತೆರಳಿದ ಪುನೀತ್ 50 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.

ಇದುವರೆಗೆ ಸ್ಯಾಂಡಲ್ ವುಡ್ ನಟರ ಪೈಕಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಭಾರೀ ಮೊತ್ತದ ಪರಿಹಾರ ನೀಡಿದವರ ಪೈಕಿ ಮೊದಲಿಗರಾಗಿದ್ದಾರೆ. ಈ ಮೂಲಕ ಕೊರೋನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ ನೆರವಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ