ತೆಲುಗಿನ ಹಾಸ್ಯನಟ ಪೃಥ್ವಿರಾಜ್ ಆಸ್ಪತ್ರೆಗೆ ದಾಖಲು

ಗುರುವಾರ, 6 ಆಗಸ್ಟ್ 2020 (11:40 IST)
ಹೈದರಾಬಾದ್ :  ಅನಾರೋಗ್ಯದ ಹಿನ್ನಲೆಯಲ್ಲಿ ತೆಲುಗಿನ ಹಾಸ್ಯನಟ ಪೃಥ್ವಿರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೃಥ್ವಿರಾಜ್ ಅವರು ಕೆಲವು ದಿನಗಳಿಂದ ಅನಾರೋಗ್ಯಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಬಗ್ಗೆ ಅವರು  ಆಸ್ಪತ್ರೆಯಿಂದಲೇ ವಿಡಿಯೋ ಮಾಡಿ ಮಾಹಿತಿ ತಿಳಿಸಿ ಜನರ ಹಾರೈಕೆಯನ್ನು ಬಯಸಿದ್ದಾರೆ.

ಅಲ್ಲದೇ ಪೃಥ್ವಿರಾಜ್ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ ಎನ್ನಲಾಗಿದೆ. ಆದರೂ ಸಹ ಅವರು ಆಸ್ಪತ್ರೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ