ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರ ಪ್ರತಿಭಟನೆ: ಇಂದು ದೇಶಾದ್ಯಂತ ಸಾಮೂಹಿಕ ಉಪವಾಸ

Sampriya

ಭಾನುವಾರ, 7 ಏಪ್ರಿಲ್ 2024 (12:20 IST)
ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಇಂದು ಸಾಮೂಹಿಕ ಉಪವಾಸ ಆಚರಿಸಲಿದ್ದಾರೆ.

ಕೇಜ್ರಿವಾಲ್ ಅವರನ್ನು ಆಪಾದಿತ ಮದ್ಯ ನೀತಿ ಹಗರಣದಲ್ಲಿ ಮಾರ್ಚ್ 21 ರಂದು ಬಂಧಿಸಲಾಯಿತು.  ಅದನ್ನು ಖಂಡಿಸಿ ದೇಶ ಹಾಗೂ ವಿದೇಶಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬೆಂಬಲಿಗರು ಪಕ್ಷದ ಸಾಮೂಹಿಕ್ ಉಪವಾಸದಲ್ಲಿ ಭಾಗವಹಿಸಲಿದ್ದಾರೆ. ಜನರು ತಮ್ಮ ಮನೆಗಳಲ್ಲಿ ಉಪವಾಸ ಆಚರಿಸಿ, ದೆಹಲಿ ಮುಖ್ಯಮಂತ್ರಿಯನ್ನು ಬೆಂಬಲಿಸಬಹುದು ಎಂದು ಎಎಪಿ ನಾಯಕ ಗೋಪಾಲ್ ರೈ ಹೇಳಿದ್ದಾರೆ.

ಎಎಪಿಯ ಶಾಸಕರು, ಪದಾಧಿಕಾರಿಗಳು ಜಂತರ್ ಮಂತರ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಸಾಮೂಹಿಕ ಉಪವಾಸಕ್ಕೆ ಸೇರಲಿದ್ದಾರೆ. ಹೀಗಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಳೆದ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟ ಮೆಗಾ ರ‍್ಯಾಲಿ ಆಯೋಜನೆ ಮೂಲಕ ಬೃಹತ್ ಶಕ್ತಿ ಪ್ರದರ್ಶನ ನಡೆಸಿತ್ತು. ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಬಿಜೆಪಿಯು ಪ್ರತಿಪಕ್ಷಗಳನ್ನು ನಾಶಮಾಡುತ್ತಿದೆ ಎಂದು ಆರೋಪಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ