ಬಿಜೆಪಿ ಶಾಸಕನ ಮೊಮ್ಮಗನ ಕಾರು ಅಪಘಾತ; ಪ್ರಶ್ನಿಸಲು ಬಂದ ಸ್ಥಳೀಯರ ಮೇಲೆ ಹಲ್ಲೆಗೆ ಯತ್ನ

ಸೋಮವಾರ, 24 ಫೆಬ್ರವರಿ 2020 (10:15 IST)
ದಾವಣಗೆರೆ : ದಾವಣಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್ ಅವರ  ಮೊಮ್ಮಗನ ಮೇಲೆ ಅಪಘಾತ ಮಾಡಿದ ಆರೋಪವೊಂದು ಕೇಳಿಬಂದಿದೆ.


ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್ ಅವರ ಪುತ್ರಿ ವೀಣಾ ನಂಜಪ್ಪ ಅವರ ಪುತ್ರ ಅರುಣ್ ಕುಮಾರ್ ಅವರು ನಿನ್ನೆ ರಾತ್ರಿ 11.50ರ ಸುಮಾರಿಗೆ ದಾವಣಗೆರೆಯ ಸಮೀಪದ ಶಾಮನೂರಿನ ಬಳಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಕಾರು ವಿದ್ಯುತ್ ಕಂಬಕ್ಕೆ ಗುದ್ದಿ ರಸ್ತೆಯ ಪಕ್ಕದಲ್ಲಿರುವ ಮನೆಗೆ ನುಗ್ಗಿದೆ.


ಈ ಬಗ್ಗೆ ಪ್ರಶ್ನಿಸಿದ ಸ್ಥಳೀಯರ ಮೇಲೆ ಅರುಣ್ ಕುಮಾರ್ ಹಲ್ಲೆಗೆ ಯತ್ನಿಸಿದ್ದಾರೆ. ಆಗ ಸ್ಥಳೀಯರು ಆಕ್ರೋಶಗೊಂಡ ಹಿನ್ನಲೆಯಲ್ಲಿ ಆತ ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ