ಡಾ.ಎಂ.ಚಿದಾನಂದಮೂರ್ತಿ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಬಿಎಸ್ ವೈ

ಶನಿವಾರ, 11 ಜನವರಿ 2020 (10:23 IST)
ಬೆಂಗಳೂರು : ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಇಂದು ನಿಧನರಾದ ಹಿನ್ನಲೆಯಲ್ಲಿ  ಅವರ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.



ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ವೈ, ಕನ್ನಡಕ್ಕೆ ಮಿಡಿಯುತ್ತಿದ್ದ ಲೇಖಕ , ಸಂಶೋಧಕ , ಚಿಂತಕ , ಇತಿಹಾಸಕಾರರಾಗಿದ್ದ ಚಿಮೂ ನಿಧನದ ಸುದ್ದಿ ನೋವಿನದ್ದು,  ಅವರ ಸ್ಥಾನ ಅನನ್ಯ, ಅದನ್ನ ಯಾರು ತುಂಬಲಾಗದು. ಬಳ್ಳಾರಿ ಜಿಲ್ಲೆಯ ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನಕ್ಕೆ ಅವರ ಪ್ರಯತ್ನ ಸ್ಮರಣೀಯ. ದೇವರು ಅವರ ಆತ್ಮಕ್ಕೆ ಶಾಂತಿಯನ್ನ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ