ಕಾಂಗ್ರೆಸ್ ಗೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಗುರುವಾರ, 29 ಆಗಸ್ಟ್ 2019 (12:29 IST)
ಬೆಂಗಳೂರು : ಕಾಂಗ್ರೆಸ್ ಗೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.



ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಇನ್ನು ಪರಿಹಾರ ನೀಡಿಲ್ಲ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ,  2009ರಲ್ಲಿ ಸುಮಾರು 17 ಸಾವಿರ ಕೋಟಿ ರೂ. ನಷ್ಟವಾಗಿತ್ತು. ಆದ್ರೆ ಅಂದಿನ ಯುಪಿಎ ಸರ್ಕಾರ 500 ಕೋಟಿ ನೀಡಿತ್ತು. ಒಂದೂವರೆ ತಿಂಗಳ ಬಳಿಕ ಪರಿಹಾರದ ಹಣವನ್ನು ನೀಡಿತ್ತು. ಹೀಗಾಗಿ ಕಾಂಗ್ರೆಸ್ ಗೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.

 

ರಾಜ್ಯ ಸರ್ಕಾರ ತುರ್ತು ಪರಿಹಾರ ಕಾರ್ಯ ಕೈಗೊಂಡಿದೆ. ಸಂತ್ರಸ್ತರ ಖಾತೆಗೆ 10 ಸಾವಿರ ರೂಪಾಯಿ ಜಮೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ