ದೀಪಾವಳಿಯನ್ನು ವಿಶೇಷವಾಗಿ ಆಚರಿಸಿದ ಡಿಸಿಎಂ ಗೋವಿಂದ ಕಾರಜೋಳ

ಮಂಗಳವಾರ, 29 ಅಕ್ಟೋಬರ್ 2019 (06:56 IST)
ಬೆಂಗಳೂರು : ಎಲ್ಲರೂ ದೀಪಾವಳಿ ಹಬ್ಬವನ್ನು ತಮ್ಮ ಕುಟುಂಬದವರೊಂದಿಗೆ ಆಚರಿಸುತ್ತಾ ಪಟಾಕಿಗಳನ್ನು ಸುಟ್ಟು ಸಂಭ್ರಮಿಸಿದರೆ  ಡಿಸಿಎಂ ಗೋವಿಂದ ಕಾರಜೋಳ ಅವರು ಮಾತ್ರ ದೀಪಾವಳಿಯನ್ನು ಬಹಳ ವಿಶೇಷವಾಗಿ ಆಚರಿಸಿದ್ದಾರೆ.




ಡಿಸಿಎಂ ಗೋವಿಂದ ಕಾರಜೋಳ ಅವರು ಸುಮನಹಳ್ಳಿಯ ಭಿಕ್ಷುಕರ ಕಾಲೋನಿಗೆ ಭೇಟಿ ನೀಡಿ ಅಲ್ಲಿದ್ದ ಭಿಕ್ಷುಕರಿಗೆ ಸಿಹಿ ಹಂಚುವುದರ ಮೂಲಕ ಈ ಬಾರಿ ದೀಪಾವಳಿಯನ್ನು ಬಹಳ ವಿಶೇಷವಾಗಿ ಆಚರಿಸಿದ್ದಾರೆ.


ಈ ವೇಳೆ ಮಾತನಾಡಿದ ಅವರು, ಭಿಕ್ಷಾಟನೆ ಎನ್ನುವುದು ಸಾಮಾಜಿಕ ಪಿಡುಗು. ಅದರ ಮೂಲೋತ್ಪಾಟನೆಗಾಗಿ ಅಂದೇ ಜಯಚಾಮರಾಜೇಂದ್ರ ಒಡೆಯರ್ ಭಿಕ್ಷುಕರ ಫುನರ್ವಸತಿ ಕೇಂದ್ರ ಸ್ಥಾಪಿಸಿದ್ದರು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ