ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಇಂದಿನಿಂದ ಆಶಾ ಕಾರ್ಯಕರ್ತೆಯರಿಂದ ಮುಷ್ಕರ

ಶುಕ್ರವಾರ, 10 ಜುಲೈ 2020 (09:53 IST)
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ  ಆಶಾ ಕಾರ್ಯಕರ್ತೆಯರು ಮುಷ್ಕರ ಕೈಗೊಂಡಿದ್ದಾರೆ.

42 ಸಾವಿರ ಸಿಬ್ಬಂದಿಯಿಂದ ಕೆಲಸಕ್ಕೆ ಬಹಿಷ್ಕಾರ ಹಾಕಿ 12 ಸಾವಿರಕ್ಕೆ ವೇತನ ಹೆಚ್ಚಿಸಲು ಆಗ್ರಹಿಸಿ ಮುಷ್ಕರ ಕೈಗೊಂಡಿದ್ದಾರೆ. ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಧರಣಿ ನಡೆಸುತ್ತಿದ್ದಾರೆ. 

ಆಶಾ ಸಿಬ್ಬಂದಿ ಮುಷ್ಕರದಿಂದ ಸರ್ಕಾರಕ್ಕೆ ಮತ್ತೆ ಸಂಕಟ ಎದುರಾಗಿದ್ದು, ಮುಷ್ಕರದಿಂದ ಸೋಂಕು ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗಿದೆ ಎನ್ನಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ