ಹಾಸನ ರಾಜಕಾರಣಿಯ ಲೈಗಿಂಕ ಚಟುವಟಿಕೆ ವಿಡಿಯೋ: ತನಿಖೆ ನಡೆಸುವಂತೆ ಕೆಪಿಸಿಸಿ ವಕ್ತಾರ ಆಯನೂರು ಒತ್ತಾಯ

Sampriya

ಶನಿವಾರ, 27 ಏಪ್ರಿಲ್ 2024 (18:19 IST)
Photo Courtesy X
ಶಿವಮೊಗ್ಗ: ಹಾಸನದ ಪ್ರಭಾವಿ ಯುವ ರಾಜಕಾರಣಿಯ ಹಲವು ಮಹಿಳೆಯರೊಂದಿಗೆ ಲೈಂಗಿಕ ಚಟುವಟಿಕೆ ನಡೆಸಿ ದೌರ್ಜನ್ಯ ಎಸಗಿದರ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸರ್ಕಾರಕ್ಕೆ ಒತ್ತಾಯಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಸದ್ಯ ರಾಜ್ಯ ರಾಜಕಾರಣದಲ್ಲಿ ಹಾಸನದ  ರಾಜಕಾರಣಿಯ ಲೈಂಗಿಕ ಹಗರಣದ ಬಗ್ಗೆಯೇ ಚರ್ಚೆಯಾಗುತ್ತಿದೆ. ಆತನ ಬಲೆಗೆ ಬಿದ್ದವರು ಬಡವರು, ಮುಸುರೆ ತಿಕ್ಕಲು ಬಂದವರು ಇದ್ದಾರೆ. ಅಷ್ಟೇ ಅಲ್ಲ, ಮಹಿಳಾ ಪೊಲೀಸರೊಬ್ಬರನ್ನು ಕೂಡ ಇದಕ್ಕೆ ಬಳಸಿಕೊಳ್ಳಲಾಗಿದೆ. ಅನ್ಯಾಯಕ್ಕೊಳಗಾದ ಹೆಣ್ಣುಮಕ್ಕಳು ಅಸಹಾಯಕರಾಗಿರುವುದರಿಂದ ದೂರು ನೀಡಲು ಕೂಡ ಅವರು ಭಯ ಪಡುತ್ತಿದ್ದಾರೆ. ಹೀಗಾಗಿ ಸರ್ಕಾರ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕೆಂದರು.

ಈ ವಿಚಾರದಲ್ಲಿ ಬಿಜೆಪಿಯವರು ಯಾಕೆ ಬಾಯಿ ಬಿಡುತ್ತಿಲ್ಲ. ಲೈಂಗಿಕ ಹಗರಣದಲ್ಲಿ ಒಂದಷ್ಡು ಒಪ್ಪಿತ, ಇನ್ನೊಂದಷ್ಟು ಬಲವಂತಕ್ಕೆ ಕಟ್ಟುಬಿದ್ದ ಮಹಿಳೆಯರು ಇದರಲ್ಲಿ ಭಾಗಿಯಾಗಿದ್ದಾರೆ. ಆದರೆ ಇದನ್ನು ವಿಡಿಯೋ ಮಾಡಿ ಇಟ್ಟುಕೊಳ್ಳುವುದು ಎಷ್ಟು ಸರಿ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ