ಬಿಸಿಲುನಾಡಲ್ಲಿ ಅದ್ಧೂರಿ ಫಲ-ಪುಷ್ಪ ಪ್ರದರ್ಶನ

ಸೋಮವಾರ, 16 ಸೆಪ್ಟಂಬರ್ 2019 (20:02 IST)
ಬಿಸಿಲುನಾಡಿನಲ್ಲಿ ಅದ್ಧೂರಿಯಾಗಿ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.  

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ (ಜಿ.ಪಂ.) ಹಾಗೂ ಕೃಷಿ ಇಲಾಖೆ-ಆತ್ಮ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ಫಲ-ಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.

ಸೆಪ್ಟೆಂಬರ್ 17 ಹಾಗೂ 18 ರಂದು ಕಲಬುರಗಿಯ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಈ ಫಲ-ಪುಷ್ಪ ಪ್ರದರ್ಶವನ್ನು ಪ್ರತಿದಿನ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ವೀಕ್ಷಿಸಬಹುದಾಗಿದೆ. 

ಸೆ. 17 ರಂದು ಸಂಜೆ 5 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಫಲ-ಪುಷ್ಪ ಪ್ರದರ್ಶವನ್ನು ಉದ್ಘಾಟಿಸುವರು.

ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ.  ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ  ಮುಖ್ಯ ಅತಿಥಿಗಳಾಗಿ  ಪಾಲ್ಗೊಳ್ಳುವರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ