ಕುಮಾರಸ್ವಾಮಿ ಜೆಡಿಎಸ್ ಮುಖ್ಯಮಂತ್ರಿಯೋ? ಕರ್ನಾಟಕ ಮುಖ್ಯಮಂತ್ರಿಯೋ?

ಬುಧವಾರ, 26 ಜೂನ್ 2019 (15:42 IST)
ಹೆಚ್.ಡಿ.ಕುಮಾರಸ್ವಾಮಿಯವರು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಜೆಡಿಎಸ್ ಮುಖ್ಯಮಂತ್ರಿಯೋ ಎಂಬುದನ್ನು ಮೊದಲು ಸ್ಪಷ್ಟ ಪಡಿಸಬೇಕೆಂಬ ಆಗ್ರಹ ಕೇಳಿಬಂದಿದೆ.

ರಾಯಚೂರಿನ ವೈಟಿಪಿಎಸ್ ಕಾರ್ಮಿಕರು ಕುಮಾರಸ್ವಾಮಿಯವರ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಕೇಳಿಲ್ಲ. ಆದರೆ ಕುಮಾರಸ್ವಾಮಿ ಸಣ್ಣತನದ ಮಾತನಾಡಿದ್ದಾರೆ. ಅವರು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಜೆಡಿಎಸ್ ಮುಖ್ಯಮಂತ್ರಿಯೋ ಎಂಬುದನ್ನು ಮೊದಲು ಸ್ಪಷ್ಟ ಪಡಿಸಬೇಕು. ಹೀಗಂತ ಬಿಜೆಪಿ ಶಾಸಕ ಸಿ.ಟಿ.ರವಿ‌ ಆಗ್ರಹ ಮಾಡಿದ್ದಾರೆ.

ಕುಮಾರಸ್ವಾಮಿಯವರು ಜೆಡಿಎಸ್ ಮುಖ್ಯಮಂತ್ರಿ ಎನ್ನುವುದಾದರೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅರ್ಹತೆ ಮತ್ತು ಯೋಗ್ಯತೆ ಎರಡೂ ನಿಮಗಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ ನಿಮಗೆ ನೀಡುವ ಎಲ್ಲ ಸೌಲಭ್ಯಗಳನ್ನು ರದ್ದು ಮಾಡಿ ಎಂದು ರಾಜ್ಯಪಾಲರಿಗೆ ಮತ್ತು ರಾಷ್ಡ್ರಪತಿಯವರಿಗೆ ಮನವಿ ಮಾಡುತ್ತೇನೆ‌ ಎಂದರು.

ಇತ್ತೀಚೆಗೆ ಕುಮಾರಸ್ವಾಮಿ ಹತಾಶೆಯಿಂದ ವರ್ತಿಸುತ್ತಿರುವುದು ನೋಡಿದ್ರೆ ಅವರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಅವರ ವೈಯಕ್ತಿಕ ಆರೋಗ್ಯ ಹಾಗೂ ರಾಜ್ಯದ ಆರೋಗ್ಯದ ದೃಷ್ಟಿಯಿಂದ ಕುಮಾರಸ್ವಾಮಿ ಸಿಎಂ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರೇ ನಿಮಗೆ ಈ ವಿಷಯದಲ್ಲಿ ಸಲಹೆ ಮಾಡುತ್ತಾರೆ ಎಂದು ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ