ಏರ್ಪೋಟ್ ಗೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು

ಶುಕ್ರವಾರ, 29 ಸೆಪ್ಟಂಬರ್ 2023 (14:20 IST)
protest
ಏರ್ಪೋಟ್ ಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.ಕಾವೇರಿ ನೀರು ಬಿಡದಂತೆ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದು,ಅರೈವಲ್( ನಿರ್ಗಮನ) ಗೇಟ್ ಬಳಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದಾರೆ.
 
ಕನ್ನಡ ಬಾವುಟಗಳನ್ನ ಕೈಯಲ್ಲಿಡಿದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆಯಲು ಏರ್ಪೋರ್ಟ್ ಪೊಲೀಸರು ಹರಸಾಹಸಪಾಟ್ಟಿದ್ದಾರೆ.ಏರ್ಪೋಟ್ ನ ಅರೈವಲ್ ಗೇಟ್ ಮುಂಬಾಗ ಹೈಡ್ರಾಮ ನಡೆದಿದೆ.20ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಎಲ್ಲರನ್ನೂ ವಶಕ್ಕೆ ಪಡೆದು ಕಾರುಗಳಲ್ಲಿ ತುಂಬಿಕೊಂಡು ಪೊಲೀಸರು ಹೋದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ