ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಮಂಗಳವಾರ, 2 ಜನವರಿ 2024 (09:08 IST)
ಬೆಂಗಳೂರು: ಅಯೋಧ್ಯೆಯಲ್ಲಿರುವುದು ಬಿಜೆಪಿಯವರ ರಾಮ. ನಮಗೆ ಸಿದ್ದರಾಮಯ್ಯನವರೇ ರಾಮ ಎಂದು ಮಾಜಿ ಸಚಿವ ಆಂಜನೇಯ ಹೇಳಿದ್ದಾರೆ.

‘ಅವರ ಈ ಹೇಳಿಕೆ ಈಗ ವೈರಲ್ ಆಗಿದೆ. ನಮಗೆ ಸಿದ್ದರಾಮಯ್ಯನೇ ಭಗವಾನ್ ರಾಮ. ಅವರ ಹೆಸರಿನಲ್ಲೇ ರಾಮ ನಾಮವಿದೆ. ಅವರೇ ನಮಗೆ ರಾಮ. ಅಯೋಧ್ಯೆಯಲ್ಲಿರುವುದು ಬಿಜೆಪಿಯವರ ರಾಮ’ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಿಂದ ದೇಣಿಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ‍್ಯಮಗಳ ಮುಂದೆ ಮಾತನಾಡುವಾಗ ಅವರು ಈ ಹೇಳಿಕೆ ನೀಡಿದ್ದಾರೆ. ನಮ್ಮ ಪಾಲಿಗೆ ರಾಮ ಎಲ್ಲೆಲ್ಲೂ ಇದ್ದಾನೆ. ಅಯೋಧ್ಯೆಯಲ್ಲಿ ರಾಜಕೀಯ ಕಾರಣಕ್ಕೆ ಬಿಜೆಪಿ ರಾಮಮಂದಿರ ಮಾಡಿದೆ ಎಂದಿದ್ದಾರೆ.

ಈ ಮೊದಲು ಸಿಎಂ ಸಿದ್ದರಾಮಯ್ಯ ನಾವು ಅಯೋಧ್ಯೆ ರಾಮ ಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ ಎಂದಿದ್ದರು. ಇದೀಗ ಸಚಿವ ಆಂಜನೇಯ ಸಿದ್ದರಾಮಯ್ಯನವರನ್ನೇ ರಾಮನಿಗೆ ಹೋಲಿಕೆ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ