ಪೊಲೀಸ್ ಇಲಾಖೆಗೋ, ಕೆಂಪಯ್ಯಗೆ ನಿಷ್ಟರೋ ಎಂದು ಪ್ರಶ್ನಿಸಿದ ಪ್ರತಾಪಸಿಂಹ

ಮಂಗಳವಾರ, 5 ಡಿಸೆಂಬರ್ 2017 (20:46 IST)
ಎಸ್ಪಿ ರವಿ ಚನ್ನಣ್ಣನವರ್‍ ವಿರುದ್ಧ ಸಂಸದ ಪ್ರತಾಪಸಿಂಹ ಮತ್ತೆ ಗುಡುಗಿದ್ದು, ಫೇಸ್‍ಬುಕ್ ಲೈವ್‍‍ನಲ್ಲಿ ರವಿ ಚನ್ನಣ್ಣವರ್ ನೀವು ಪೊಲೀಸ್ ಇಲಾಖೆಗೋ ಅಥವಾ ಕೆಂಪಯ್ಯಗೆ ನಿಷ್ಟರೋ ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಮಾಸ್ಟರ್ ಯಾರೆಂದು ನನಗೆ ಗೊತ್ತಿದೆ. ಕರ್ತವ್ಯದ ಹೆಸರಿನಲ್ಲಿ ಜಿಲ್ಲಾಧಿಕಾರಿಯನ್ನು ಎಳೆದು ತರಬೇಡಿ ಎಂದು ಟಾಂಗ್ ನೀಡಿದ್ದಾರೆ.
 
ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಎದ್ದಿರುವ ವಿವಾದದ ಬಗ್ಗೆ ಮಾತನಾಡಿ, ಸರ್ಕಾರದ ಮೇಲೆ ಒತ್ತಡ ತರುವ ಪ್ರತಿಭಟನೆ ಮಾಡಿದ್ದೀರಾ ಅಂತ ಕೇಳಿದ್ದಾರೆ. ಅದಕ್ಕೆ ನಾನು ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಪ್ರತಿಭಟನೆ ಮಾಡುತ್ತೇನೆ ಎಂದು ಹೇಳಿದ್ದೆ. ಆದರೆ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ