ಬಿಜೆಪಿಗೆ ರಮೇಶ್ ಜಾರಕಿಹೊಳಿ ಗುಡ್ ಬೈ ? ಬೆಂಬಲಿಗರಿಗೆ ಸಚಿವ ಸ್ಥಾನ ಮರೀಚಿಕೆ?

ಭಾನುವಾರ, 2 ಫೆಬ್ರವರಿ 2020 (14:22 IST)
ಉಪ ಚುನಾವಣೆ ನಡೆದು ಫಲಿತಾಂಶ ಬಂದು ತಿಂಗಳುಗಳ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಶುರುವಾಗಿದೆ. ಆದರೆ ಜಾರಕಿಹೊಳಿ ನಡೆ ಹುಬ್ಬೇರಿಸುವಂತೆ ಮಾಡಿದೆ.

ಬೈ   ಎಲೆಕ್ಷನ್ ನಲ್ಲಿ ಗೆದ್ದಿರುವ ಎಲ್ಲರಿಗೂ ಸಚಿವ ಸ್ಥಾನ ನೀಡಬೇಕು. ಸೋತವರಿಗೂ ಈ ಹಿಂದೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಹೀಗಂತ ಬಿಗಿಪಟ್ಟನ್ನು ರಮೇಶ್ ಜಾರಕಿಹೊಳಿ ಹಿಡಿದಿದ್ದಾರೆ ಎನ್ನಲಾಗಿದ್ದು, ಇದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ತಲೆ ನೋವಿಗೆ ಕಾರಣವಾಗ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದರೆ ಜಾರಕಿಹೊಳಿ ಆಪ್ತರಾದ ಮಹೇಶ್ ಕುಮಠಳ್ಳಿ ಹಾಗೂ ಶ್ರೀಮಂತ ಪಾಟೀಲ್ ಗೆ ಮಂತ್ರಿಗಿರಿ ಸಿಗೋದು ಡೌಟ್.

ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕು ಅಂತ ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಇದು ಬಿಜೆಪಿ ವರಿಷ್ಠರು ಹಾಗೂ ಸಿಎಂಗೆ ಚಿಂತೆಗೀಡು ಮಾಡುವಂತೆ ಮಾಡಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ