ಆತ್ಮಹತ್ಯೆ ಗೆ ಶರಣಾದ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಕೆ.ಸರಳಾಯ

ಭಾನುವಾರ, 1 ಮಾರ್ಚ್ 2020 (08:56 IST)
ಉಡುಪಿ : ಉಡುಪಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಕೆ.ಸರಳಾಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಇವರಿಗೆ 88 ವರ್ಷ ವಯಸ್ಸಾಗಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಇವರು ನಿನ್ನೆ ಮಧ್ಯಾಹ್ನತಮ್ಮ ಮನೆಯ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕರ್ತರು ಶವವನ್ನು ಹೊರಗೆ ತೆಗೆದಿದ್ದಾರೆ, ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ರಥಬೀದಿಯಲ್ಲಿ ಪಟಾಕಿ ಮಾರಿ ಜೀವನ ನಡೆಸುತ್ತಿದ್ದ ಸರಳಾಯ ಅವರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇವರು ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಗೆ ಆಪ್ತರಾಗಿದ್ದರು ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ