ದೆಹಲಿಗೆ ಹೋಗಿ ಪ್ರಾರ್ಥನೆ ಮಾಡಿದ್ದ 19 ಜನ ಕ್ವಾರಂಟೈನ್ ಗೆ ಶಿಫ್ಟ್

ಬುಧವಾರ, 1 ಏಪ್ರಿಲ್ 2020 (14:01 IST)
ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡಿದ್ದ 19 ಜನರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

ಕಲಬುರಗಿಯ  19 ಜನರನ್ನು ಜಿಲ್ಲಾಡಳಿತವು  ಇಎಸ್ ಐ ಆಸ್ಪತ್ರೆಯ  ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಿದೆ ಎಂದು ಉಪಮುಖ್ಯಮಂತ್ರಿ‌ ಗೋವಿಂದ ಕಾರಜೋಳ ತಿಳಿಸಿದ್ದಾರೆ.

 ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಿತರಾಗಿ ವೈದ್ಯರ ಬಳಿ ಬಂದು  ತಪಾಸಣೆಗೊಳಗಾಗಬೇಕು. ಸರ್ಕಾರದ ವತಿಯಿಂದಲೇ  ಕ್ವಾರಂಟೈನ್ ನಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತದೆ.  ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. 

ತಮ್ಮ , ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯ ದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಹಕರಿಬೇಕು ಎಂದು   ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ