ಗೋಹತ್ಯೆ ತಡೆಯದ ಸಿದ್ದರಾಮಯ್ಯ ನಿಜವಾದ ಹಿಂದೂವಾಗಲು ಸಾಧ್ಯವೇ– ಈಶ್ವರಪ್ಪ

ಭಾನುವಾರ, 7 ಜನವರಿ 2018 (18:47 IST)
ಗೋಹತ್ಯೆ, ಲವ್ ಜಿಹಾದ್ ತಡೆಯದವರು ಹಾಗೂ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆ ನಿಷೇಧ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಜವಾದ ಹಿಂದೂವಾಗಲು ಸಾಧ್ಯವೇ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
 
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ‍್ಪ, ರಾಜ್ಯದಲ್ಲಿ ಮುಸ್ಲಿಂ ಗೂಂಡಾಗಳು ಹೆಚ್ಚಾಗಿದ್ದಾರೆ. ಅವರು ಹಿಂದೂಗಳನ್ನೆ ಕೊಲ್ಲುತ್ತಿದ್ದಾರೆ. ಸಿದ್ದರಾಮಯ್ಯ ಹಿಂದೂ ಆಗಿದ್ದರೆ ಇವುಗಳನ್ನು ತಡೆಯಬೇಕಾಗಿತ್ತು ಎಂದಿದ್ದಾರೆ.
 
ಆರ್‌ಎಸ್‌ಎಸ್ ನಿಷೇಧ ಮಾಡಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಂದಲೂ ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ