ಈ ವಿಚಾರದ ಕುರಿತು ಸಿಎಂ ಗೆ ಪತ್ರ ಬರೆದ ಸಿದ್ದರಾಮಯ್ಯ

ಬುಧವಾರ, 19 ಫೆಬ್ರವರಿ 2020 (10:44 IST)
ಬೆಂಗಳೂರು : ಬಜೆಟ್ ನಲ್ಲಿ ಬಾದಾಮಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ಮೀಸಲಿಡುವಂತೆ ಒತ್ತಾಯಿಸಿ, ಬಾದಾಮಿ ಕ್ಷೇತ್ರದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಿಎಂ  ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.


ಈ ಕುರಿತು ಸಿಎಂ ಪತ್ರ ಬರೆದಿರುವ ಸಿದ್ದರಾಮಯ್ಯ, ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬೇಕಾಗಿದೆ. ಕನಿಷ್ಠ 250ಕೋಟಿ ರೂ.ಗೂ ಹೆಚ್ಚಿನ ಅನುದಾನ ಬೇಕಾಗಿದೆ. ಹೀಗಾಗಿ ಬಜೆಟ್ ನಲ್ಲಿ ಅನುದಾನ ಮೀಸಲಿಡುವಂತೆ ಒತ್ತಾಯಿಸಿದ್ದಾರೆ.
ಅಲ್ಲದೇ  ನಿನ್ನೆ ಸಿಎಂ ಭೇಟಿ ವೇಳೆಯೂ ಅನುದಾನದ ಬಗ್ಗೆ ಪ್ರಸ್ತಾಪ ಮಾಡಿರುವ ಸಿದ್ದರಾಮಯ್ಯ ಇದೀಗ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ