ಕೆ.ಆರ್ ಪೇಟೆಯಲ್ಲಿ ಚುನಾವಣೆಯಲ್ಲಿ ತಟಸ್ಥವಾಗಿರಲು ನಿರ್ಧರಿಸಿದ ಸಂಸದೆ ಸುಮಲತಾ

ಬುಧವಾರ, 27 ನವೆಂಬರ್ 2019 (11:06 IST)
ಬೆಂಗಳೂರು : ಉಪಚುನಾವಣೆಯ ಹಿನ್ನಲೆಯಲ್ಲಿ ಕೆ.ಆರ್ ಪೇಟೆಯಲ್ಲಿ  ಸಂಸದೆ ಸುಮಲತಾ ಅಂಬರೀಶ್ ಯಾವ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ ಎಂಬ ವಿಚಾರಕ್ಕೆ ಇದೀಗ ತೆರೆಬಿದ್ದಿದೆ.




ಕೆ.ಆರ್ ಪೇಟೆಯಲ್ಲಿ  ಸಂಸದೆ ಸುಮಲತಾ ಅವರ ಮನವೊಲಿಸಿ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಕರೆತರಲು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷದ ನಾಯಕರು ಹರಸಾಹಸ ಮಾಡಿದ್ದಾರೆ.


ಆದರೆ ನನಗೆ ನೀವೂ ಬೇಕು. ಅವರೂ ಬೇಕು. ಹೀಗಾಗಿ ನಾನು ಯಾರ ಪರವೂ ಪ್ರಚಾರಕ್ಕೆ ಬರಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಹೇಳುವುದರ ಮೂಲಕ ತಮ್ಮ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ನೀಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ