ಮಾಸ್ಕ್ ಹಾಕಲು ಹೇಳಿದ್ದಕ್ಕೆ ಅಂಗಡಿ ಸಿಬ್ಬಂದಿಯ ಮೇಲೆ ಹಲ್ಲೆ

ಬುಧವಾರ, 27 ಮೇ 2020 (09:40 IST)
ಪುತ್ತೂರು : ಮಾಸ್ಕ್ ಹಾಕಲು ಹೇಳಿದ್ದಕ್ಕೆ ಅಂಗಡಿ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.


ಮಾಸ್ಕ್ ಧರಿಸದೆ ರಿಲಯನ್ಸ್ ಮಾರ್ಟ್ ಗೆ ಆಗಮಿಸುತ್ತಿದ್ದ ದುಷ್ಕರ್ಮಿಗಳಿಗೆ ಅಂಗಡಿಯ ಸಿಬ್ಬಂದಿ ಮಾಸ್ಕ್ ಧರಿಸುವಂತೆ ಹೇಳಿದ್ದಾನೆ. ಇದರಿಂದ ಕೋಪಗೊಂಡ ದುಷ್ಕರ್ಮಿಗಳು ಅಂಗಡಿ ಸಿಬ್ಬಂದಿಯ  ಮೇಲೆ ಹಲ್ಲೆ ಮಾಡಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಅಂಗಡಿಯ ಸಿಬ್ಬಂದಿಯ ದೂರಿನ ಮೇರೆಗೆ  ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ