ಪೊಲೀಸ್ ಇಲಾಖೆಯಲ್ಲಿ ಬುಗಿಲೆದ್ದ ಅಸಮಾಧಾನ; ಎಡಿಜಿಪಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆ

ಗುರುವಾರ, 29 ಅಕ್ಟೋಬರ್ 2020 (09:41 IST)
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಅಸಮಾಧಾನ ಬುಗಿಲೆದ್ದ ಹಿನ್ನಲೆಯಲ್ಲಿ ಎಡಿಜಿಪಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆ ನೀಡಿದ್ದಾರೆ.

ಟಿ.ಸುನೀಲ್ ಕುಮಾರ್ ಹಾಗೂ ಎಡಿಜಿಪಿ ಡಾ.ಪಿ.ರವೀಂದ್ರನಾಥ್ ಇಂದೇ ಬ್ಯಾಚ್ ನವರಾಗಿದ್ದರು. ಆದರೆ ಟಿ.ಸುನೀಲ್ ಕುಮಾರ್ ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿದ್ದಾರೆ. ಈ  ಹಿನ್ನಲೆಯಲ್ಲಿ  ಎಡಿಜಿಪಿ ಡಾ.ಪಿ.ರವೀಂದ್ರನಾಥ್ ಅಸಮಾಧಾನಗೊಂಡಿದ್ದಾರೆ.

ಆದಕಾರಣ ಎಡಿಜಿಪಿ ಡಾ.ಪಿ.ರವೀಂದ್ರನಾಥ್ ರಾತ್ರೋರಾತ್ರಿ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ