ಸಿಎಂ ಪರಿಹಾರ ನಿಧಿಗೆ 2 ತಿಂಗಳ ವೇತನ ಕೊಟ್ಟ ಖರ್ಗೆ ಹೇಳಿದ್ದೇನು?

ಭಾನುವಾರ, 29 ಮಾರ್ಚ್ 2020 (17:14 IST)
ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಸಿಎಂ ಪರಿಹಾರ ನಿಧಿಗೆ ಮಾಜಿ ಸಚಿವ ಹಾಗೂ ಶಾಸಕ ಪ್ರಿಯಾಂಕ ಖರ್ಗೆ 2 ತಿಂಗಳ ತಮ್ಮ ವೇತನ ನೀಡಿದ್ದಾರೆ.

ಕಾಂಗ್ರೆಸ್ ನ ಶಾಸಕರು ತಮ್ಮ ಒಂದು ತಿಂಗಳ ವೇತನ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ 2 ಲಕ್ಷ ರೂ. ಗಳ ಚೆಕ್ ನೀಡಿದ್ದಾರೆ ಪ್ರಿಯಾಂಕ ಖರ್ಗೆ.

ಸೂಕ್ತ ಬಸ್ ವ್ಯವಸ್ಥೆ ಮಾಡಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ದುಡಿಯುತ್ತಿರುವ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅವರ ಊರುಗಳಿಗೆ ತೆರಳುವಂತೆ ವ್ಯವಸ್ಥೆ ಮಾಡುವಂತೆ ಸಿಎಂಗೆ ಖರ್ಗೆ ಪತ್ರ ಬರೆದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ