ಶಾಸಕ ಹ್ಯಾರಿಸ್ ಹಾಗೂ ತನ್ವೀರ್ ಸೇಠ್ ಘಟನೆಗಳನ್ನು ನೋಡಿ ಆತಂಕಗೊಂಡ ಜಮೀರ್ ಅಹಮ್ಮದ್

ಗುರುವಾರ, 23 ಜನವರಿ 2020 (10:34 IST)
ಬೆಂಗಳೂರು : ಶಾಸಕ ಹ್ಯಾರಿಸ್ ಹಾಗೂ ತನ್ವೀರ್ ಸೇಠ್ ಘಟನೆಗಳನ್ನು ನೋಡಿ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಆತಂಕವಾಗುತ್ತಿದೆ ಎಂದು ಮಾಜಿ ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.


ಸ್ಫೋಟದಿಂದ ಗಾಯಗೊಂಡ ಶಾಸಕ ಹ್ಯಾರಿಸ್ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಬಗ್ಗೆ ಅನುಮಾನಗಳು ಕಾಡತೊಡಗಿದೆ. ಶಾಸಕ ಹ್ಯಾರಿಸ್ ಹಾಗೂ ತನ್ವೀರ್ ಸೇಠ್ ಮೇಲೆ ನಡೆದ ಘಟನೆಗಳಿಂದ ಎಂದು ರೀತಿ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವಿಚಲಿತರಾಗಿದ್ದೇವೆ ಎಂದು ಆತಂಕ ಹೊರಹಾಕಿದ್ದಾರೆ.


ಅಲ್ಲದೇ ನಾನು ಇತ್ತೀಚೆಗೆ ಎನ್.ಆರ್.ಸಿ ವಿರೋಧಿ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರಿಂದ ಬಿಜೆಪಿ ಸರ್ಕಾರ ನನಗೆ ಕೊಟ್ಟಿರುವ ಭದ್ರತೆಯನ್ನ ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆದರೂ ನಾನು ಎನ್.ಆರ್.ಸಿ ವಿರೋಧಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ