ಮೇಲ್ಜಾತಿಯವರ ಜಮೀನಿನಲ್ಲಿ ಮಲವಿಸರ್ಜನೆ ಮಾಡಿದ ದಲಿತ ಯುವಕನಿಗೆ ಜನರು ಮಾಡಿದ್ದೇನು ಗೊತ್ತಾ?

ಸೋಮವಾರ, 17 ಫೆಬ್ರವರಿ 2020 (08:55 IST)
ಚೆನ್ನೈ : ಮೇಲ್ಜಾತಿಯವರ ಜಮೀನಿನಲ್ಲಿ ಮಲವಿಸರ್ಜನೆ ಮಾಡಿದ್ದ ದಲಿತ ಯುವಕನೊಬ್ಬನ್ನು ಅಲ್ಲಿನ ಸ್ಥಳೀಯರು ಕೈಕಾಲು ಕಟ್ಟಿ ಹೊಡೆದು ಸಾಯಿಸಿದ ಘಟನೆ ತಮಿಳುನಾಡಿನ ವಿಲ್ಲಪುರಂ ಜಿಲ್ಲೆಯಲ್ಲಿ ನಡೆದಿದೆ.


ಶಕ್ತಿವೆಲ್  ಮೃತಪಟ್ಟ ಯುವಕ. ಈ ಘಟನೆ ಫೆ.12ರಂದು ನಡೆದಿದ್ದು, ಜನರು ಆತನನ್ನು ಥಳಿಸಿರುವ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿಇದೀಗ ಬೆಳಕಿಗೆ ಬಂದಿದೆ.


ಈ ಘಟನೆಗೆ ಸಂಬಂಧಿಸಿದಂತೆ ಆತನ ಸಹೋದರಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಎಸ್.ಸಿ/ಎಸ್.ಟಿ. ದೌರ್ಜನ್ಯ ತಡೆ  ಮತ್ತು ಕೊಲೆ ಅಪರಾಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ