ನಿರ್ಮಲಾ ಪ್ಯಾಕೇಜ್ 2: ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ

ಗುರುವಾರ, 14 ಮೇ 2020 (17:08 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಿದ್ದು, ನಿತ್ಯದ ಅನ್ನಕ್ಕಾಗಿ ಪರದಾಡುತ್ತಿರುವ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ಯೋಜನೆ ಘೋಷಣೆ ಮಾಡಿದ್ದಾರೆ.


ಮುಂದಿನ ಎರಡು ತಿಂಗಳವರೆಗೆ ವಲಸೆ ಕಾರ್ಮಿಕರಿಗೆ ಉಚಿತ 5 ಕೆಜಿ ಅಕ್ಕಿ ಅಥವಾ ಗೋಧಿ ಮತ್ತು 1 ಕೆಜಿ ಬೇಳೆ ವಿತರಣೆ ಮಾಡಲಾಗುವುದು. ಇದನ್ನು ರೇಷನ್ ಪೋರ್ಟೆಬಿಲಿಟಿ ಕಾರ್ಡ್ ಮೂಲಕ ಉಚಿತವಾಗಿ ಪಡೆಯಬಹುದು. ಇದನ್ನು ದೇಶದ ಯಾವುದೇ ಮೂಲೆಯಲ್ಲಾದರೂ ಪಡೆಯಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ