ಅಯೋಧ್ಯೆಯ ಬಾಲರಾಮನ ನಿರ್ಮಾಣಕ್ಕೆ ಕರ್ನಾಟಕದ ಕಲ್ಲು

ಗುರುವಾರ, 20 ಏಪ್ರಿಲ್ 2023 (08:34 IST)
ಲಕ್ನೋ : ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಈ ನಿರ್ಮಾಣದಲ್ಲಿ ಕರ್ನಾಟಕದವರ ಕೊಡುಗೆಯೂ ಹೆಚ್ಚಿರುವುದು ಹೆಮ್ಮೆಯ ವಿಷಯವಾಗಿದೆ.

ಅದರಲ್ಲೂ ಬಾಲರಾಮನ ವಿಗ್ರಹವನ್ನು ನಿರ್ಮಿಸಲು ರಾಜ್ಯದ ಕಾರ್ಕಳ ಹಾಗೂ ಹೆಚ್.ಡಿ. ಕೋಟೆಯಿಂದ ತರಿಸಲಾದ ಕಪ್ಪು ಕಲ್ಲನ್ನು ಬಳಸಲು ನಿರ್ಧರಿಸುವುದು ವಿಶೇಷವಾಗಿದೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯರು ಸೋವಾರದಿಂದ 2 ದಿನಗಳ ಸಭೆ ಸೇರಿದ್ದು, ಅಲ್ಲಿ ವಿಗ್ರಹಕ್ಕೆ ಅಗತ್ಯವಾದ ಶಿಲೆ ಬಳಕೆ, ವಿಗ್ರಹದ ಸ್ವರೂಪ, ಶಿಲ್ಪಿ ಆಯ್ಕೆಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ವೇಳೆ ನೂತನ ರಾಮನ ವಿಗ್ರಹ ನಿರ್ಮಾಣದ ಹೊಣೆಯನ್ನು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ವಹಿಸಲು ತೀರ್ಮಾನಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ