ಪ್ರಜ್ವಲ್ ಬಂಧನಕ್ಕೆ ಕೇಂದ್ರದಿಂದ ಸಿಗುತ್ತಿಲ್ಲ ಸಕಾರಾತ್ಮಕ ಸ್ಪಂದನೆ: ಕಾಂಗ್ರೆಸ್ ಆರೋಪ

Sampriya

ಗುರುವಾರ, 9 ಮೇ 2024 (16:27 IST)
ಬೆಂಗಳೂರು:  ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮೌನ ವಹಿಸಿಸದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ‌

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, "ನಮ್ಮ ಸರ್ಕಾರ ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು. ಆದರೆ ವಿದೇಶದಲ್ಲಿ ಪ್ರಜ್ವಲ್ ಬಂಧನಕ್ಕೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಸಕಾರಾತ್ಮಕ ಸಹಕಾರ ಸಿಕ್ಕಿಲ್ಲ" ಎಂದು ಆರೋಪಿಸಿದೆ.

ಪೋಸ್ಟ್ ಹೀಗಿದೆ:  ಪ್ರಜ್ವಲ್ ವಿರುದ್ಧ ಬ್ಲೂ ಕರ್ನಾರ್ ನೋಟಿಸ್ ಹೊರಡಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು ನಮ್ಮ ಸರ್ಕಾರ. ಆದರೆ ವಿದೇಶದಲ್ಲಿರುವ ಪ್ರಜ್ವಲ್ ಬಂಧನಕ್ಕೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಸಕಾರಾತ್ಮಕ ಸಹಕಾರ ಸಿಕ್ಕಿಲ್ಲ. ವಿದೇಶಾಂಗ ಇಲಾಖೆ ಮೌನವಹಿಸಿ ಕುಳಿತಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಜ್ವಲ್ ರಕ್ಷಣೆಗೆ ನಿಂತಿರುವುದು ಇದರಿಂದ ಸ್ಪಷ್ಟವಾಗುತ್ತದೆ .

"ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೌನವಾಗಿದೆ. ಇದು ಸ್ವತಃ ಪ್ರಜ್ವಲ್ ಪರವಾಗಿ ನಿಂತಿದೆ ಎಂದು ಸ್ಪಷ್ಟಪಡಿಸುತ್ತದೆ" ಎಂದು ಪೋಸ್ಟ್ ಓದುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ