ಇಂದು ರಾಜ್ಯದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಸಂವಾದ

ಶುಕ್ರವಾರ, 24 ಏಪ್ರಿಲ್ 2020 (09:22 IST)
ನವದೆಹಲಿ : ಕೊರೊನಾದಿಂದ ಗ್ರಾಮೀಣ ಪ್ರದೇಶವನ್ನು ರಕ್ಷಿಸಲು ಇಂದು ಪ್ರಧಾನಿ ಮೋದಿಯವರು ರಾಜ್ಯದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜತೆ ಸಂವಾದ ನಡೆಸಲಿದ್ದಾರೆ.


ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾದ  ಹಿನ್ನಲೆಯಲ್ಲಿ ಈ ಸಂವಾದ ಕಾರ್ಯಕ್ರಮ ನಡೆಸಲಾಗುತ್ತಿದೆ. ಇಂದು ಪ್ರಧಾನಿ ಮೋದಿ  ವಿಡಿಯೋ ಕಾನ್ಫರೆನ್ಸ್  ಮೂಲಕ ರಾಜ್ಯದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜತೆ ಸಂವಾದ ನಡೆಸಲಿದ್ದಾರೆ.


ಅಷ್ಟೇ ಅಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿ ಗ್ರಾ.ಪಂ.ಅಧ್ಯಕ್ಷ ನವೀನ್ ಕುಮಾರ್ ಇಂದು ಪ್ರಧಾನಿ ಮೋದಿ ಜೊತೆಗಿನ ಸವಾದದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ