ಈ ರೀತಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ ಕಾಂಗ್ರೆಸ್ ಹೈಕಮಾಂಡ್

ಮಂಗಳವಾರ, 14 ಏಪ್ರಿಲ್ 2020 (07:09 IST)

ನವದೆಹಲಿ : ಬಡವರು, ನಿರ್ಗತಿಕರಿಗೆ ಸಹಾಯ ಮಾಡುವುದರ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

 

ಈ ಬಗ್ಗೆ ಪತ್ರ ಬರೆದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ, ಜಿಲ್ಲೆ, ತಾಲೂಕಿನ ಕಚೇರಿಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಬೇಕು. ಆ ವೇಳೆ ಲಾಕ್ ಡೌನ್ ನಿಯಮವನ್ನು ಪಾಲಿಸಬೇಕು. ಎಲ್ಲಾ ನಾಯಕರು ಮನೆಯಲ್ಲಿಯೇ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಬೇಕು ಎಮದು ತಿಳಿಸಿದ್ದಾರೆ.

 

ಹಾಗೇ ಬಡವರಿಗೆ, ನಿರ್ಗತಿಕರಿಗೆ ಊಟ, ಅಗತ್ಯ ವಸ್ತುಗಳನ್ನು ನೀಡಿ, ಸಮಾನತೆ, ಸಾಮಾಜಿಕ ನ್ಯಾಯ ಅಂಬೇಡ್ಕರ್ ಚಿಂತನೆಗಳನ್ನು ಜನರಿಗೆ ತಲುಪಿಸಿ ಎಂದು ಕಾರ್ಯಕರ್ತರಿಗೆ ಕೆ.ಸಿ.ವೇಣುಗೋಪಾಲ್ ಪತ್ರದ ಮೂಲಕ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ