ಕಂಬಳದಲ್ಲಿ ಉಸೇನ್ ಬೋಲ್ಟ್ ದಾಖಲೆ ಮೀರಿಸಿದ ಶ್ರೀನಿವಾಸ ಗೌಡರನ್ನು ಅಭಿನಂದಿಸಿದ ಉಪರಾಷ್ಟ್ರಪತಿ

ಭಾನುವಾರ, 16 ಫೆಬ್ರವರಿ 2020 (12:28 IST)
ನವದೆಹಲಿ : ಕಂಬಳದಲ್ಲಿ ಉಸೇನ್ ಬೋಲ್ಟ್ ದಾಖಲೆ ಮೀರಿಸಿದ ಶ್ರೀನಿವಾಸ ಗೌಡರನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಅಭಿನಂದಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಂಬಳ  ಸ್ಪರ್ಧೆಯ ವೇಳೆ ಅಪರೂಪದ ಸಾಧನೆ ಮಾಡಿ ಉಸೇನ್ ಬೋಲ್ಟ್ ರೊಂದಿಗೆ ಹೋಲಿಸ್ಪಡುತ್ತಿರುವ  ಕರ್ನಾಟಕದ ಶ್ರೀನಿವಾಸ ಗೌಡ ಕೀರ್ತಿ ಪಡೆದಿದ್ದಾರೆ. ದೇಶದಲ್ಲಿ ಸಾಕಷ್ಟು ಸುಪ್ತ ಪ್ರತಿಭೆಗಳಿದ್ದು, ಅವರ ಪೂರ್ಣ ಸಾಮರ್ಥ್ಯದ ಸಾಕಾರಕ್ಕಾಗಿ ಅದನ್ನು ತಿಳಿಯುವ , ಮನ್ನಣೆ ನೀಡುವ, ಗೌರವಿಸುವ ಮತ್ತು ಪೋಷಿಸುವ ಅಗತ್ಯವಿದೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ