ಬಿಜೆಪಿ ಹಾಗೂ ಸಂಘ ಪರಿವಾರದವರು ಹುಟ್ಟಿದ್ದು ಹಿಂದೂಗಳಾಗಿ, ಆದರೆ ಅವರಿಗೆ ಆ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ - ಇಕ್ಬಾಲ್ ಅನ್ಸಾರಿ

ಭಾನುವಾರ, 22 ಏಪ್ರಿಲ್ 2018 (07:23 IST)
ಕೊಪ್ಪಳ : ಬಿಜೆಪಿ ಹಾಗೂ ಸಂಘ ಪರಿವಾರದವರು ಹುಟ್ಟಿದ್ದು ಹಿಂದೂಗಳಾಗಿ, ಆದರೆ ಅವರಿಗೆ ಆ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ ಎಂದು ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅನ್ಸಾರಿ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.


ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,’ ಬಿಜೆಪಿ, ಸಂಘ ಪರಿವಾರದವರು ಹಿಂದೂಗಳಲ್ಲ. ಹಿಂದೂ ಎಂಬ ಕಾರ್ಡ್ ಉಪಯೋಗಿಸಿ ಬಿಜೆಪಿಯವರು ರಾಜಕೀಯ ಮಾಡ್ತಾ ಇದ್ದಾರೆ. ಅವರಿಗೆ ಆ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ’ ಎಂದು ಹೇಳಿದ್ದಾರೆ.


ಹಾಗೇ ನನ್ನನ್ನು ಸೋಲಿಸಲು ಬಿಜೆಪಿಯವರು ಪ್ರಾಯೋಜಿತರಾಗಿ ಜೆಡಿಎಸ್ ಹಾಗೂ ಪಕ್ಷೇತರರನ್ನ ನನ್ನ ವಿರುದ್ಧ ನಿಲ್ಲಿಸಿದ್ದಾರೆ. ಆದ್ರೆ ಅದು ಅಸಾಧ್ಯ. ಅಭಿವೃದ್ಧಿಯೇ ನನ್ನ ಮೂಲಮಂತ್ರ. ನನಗೆ ವಿಶ್ವಾಸವಿದೆ ಜನ ನಮಗೆ ಆರ್ಶೀವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ