ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎರಡಪ ಸಾರ್ವಜನಿಕ ಸಭೆಗಳಲ್ಲಿ ಸುಳ್ಳು ಹೇಳಿಕೆಗಳನ್ನು ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ ಎಂದು ಆಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೈ ಆರೋಪಿಸಿದ್ದಾರೆ.
ಇಂದು ನರೇಂದ್ರ ಮೋದಿಯವರ ಗುಟ್ಟು ರಟ್ಟು ಮಾಡುವಂತಹ ಸುವರ್ಣಾವಕಾಶ ಒದಗಿ ಬಂದಿದೆ. ಮೋದಿಯೊಬ್ಬ ಸಾಮಾನ್ಯ ಮನುಷ್ಯ. ಇಂತಹ ಬೇಜವಾಬ್ದಾರಿ ವ್ಯಕ್ತಿಯನ್ನು ನಾನು ಯಾವತ್ತೂ ನೋಡಿಲ್ಲ. ಇಂತಹ ವ್ಯಕ್ತಿ ದೇಶದ ಪ್ರಧಾನಿಯಾಗಲು ಬಯಸುತ್ತಾನೆ ಎಂದು ಲೇವಡಿ ಮಾಡಿದ್ದಾರೆ.
ಮೋದಿ ಮೊಸಳೆ ಕಣ್ಣೀರು ಹರಿಸುತ್ತಿದ್ದಾರೆ. ಕೆಲ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಅವರಿಗೆ ಆಸ್ಸಾಂ ರಾಜ್ಯದ ನೆನಪಾಗಿದೆ. ರಾಜ್ಯದಿಂದ ಹೊರ ಹೊದ ನಂತರ ಆಸ್ಸಾಂ ರಾಜ್ಯವನ್ನು ಮರೆತುಬಿಡುತ್ತಾರೆ. ವಾಜಪೇಯಿ ಅಧಿಕಾರದಲ್ಲಿದ್ದಾಗ ಕೂಡಾ ಆಸ್ಸಾಂ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡಿರಲಿಲ್ಲ ಎಂದು ಕಿಡಿಕಾರಿದ್ದಾರೆ.
ನರೇಂದ್ರ ಮೋದಿ ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ಆರೆಸ್ಸೆಸ್ ಸಿದ್ಧಾಂತಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಲ್ಲದೇ ಆ ಸಂಸ್ಥೆಗೆ ಬದ್ದರಾಗಿದ್ದಾರೆ.