ನಾಲ್ಕು ಬೆರಳಿಗೆ ನವ ರತ್ನಗಳು : ನಿಮಗ್ಯಾವ ರತ್ನ?

ಶುಕ್ರವಾರ, 31 ಜನವರಿ 2014 (12:13 IST)
PR
PR
ರತ್ನಗಳಲ್ಲಿ ಪ್ರಮುಖವಾಗಿ ಒಂಬತ್ತು ರತ್ನಗಳನ್ನು ಶುಭದಾಯಕ ಎಂಬ ಕಾರಣಕ್ಕೆ ನಾವು ಧರಿಸುತ್ತಿದ್ದೇವೆ. ಸೂರ್ಯನಿಗೆ ಮಾಣಿಕ್ಯ, ಚಂದ್ರನಿಗೆ ಮುತ್ತು, ಮಂಗಳನಿಗೆ ಕೆಂಪು ಹವಳ, ಬುಧನಿಗೆ ಮರಕತ (ಪಚ್ಚೆ), ಗುರುವಿಗೆ ಹಳದಿ ಪುಷ್ಯರಾಗ, ಶುಕ್ರನಿಗೆ ವಜ್ರ, ಶನಿಗೆ ನೀಲ, ರಾಹುವಿಗೆ ಗೋಮೇದಿಕ ಮತ್ತು ಕೇತುವಿಗೆ ವೈಢೂರ್ಯ.

ಪುಷ್ಯರಾಗ ಮಣಿಯನ್ನು (Yellow sapphire) ತರ್ಜನಿ (ತೋರು) ಬೆರಳಿಗೇ ಧರಿಸಬೇಕೆಂದು ಯಾಕೆ ಸೂಚಿಸುತ್ತಾರೆ? ಯಾಕೆಂದರೆ, ಯಾವುದೇ ವ್ಯಕ್ತಿ ಎಚ್ಚರಿಕೆ ಅಥವಾ ನಿರ್ದೇಶನ ನೀಡುವುದು ಇದೇ ಬೆರಳಿನ ಮೂಲಕ. ಇದೇ ಬೆರಳು ಜಗಳಕ್ಕೂ ಕಾರಣವಾಗುತ್ತದೆ, ಹೀಗಾಗಿ ಎಚ್ಚರದಿಂದಿರುವಂತೆ ಹೇಳಲೂ ಕೆಲಸಕ್ಕೆ ಬರುತ್ತದೆ. ಇದಕ್ಕಾಗಿ ಗುರುವಿನ ರತ್ನ ಪುಷ್ಯರಾಗವನ್ನು ಧರಿಸಬೇಕೆಂದು ಸಲಹೆ ನೀಡಲಾಗುತ್ತದೆ. ಈ ಮಣಿಯನ್ನು ಧರಿಸುವುದರಿಂದ ಆ ವ್ಯಕ್ತಿಗೆ ಗಂಭೀರತೆ ಬರುತ್ತದೆ ಮತ್ತು ಆತ ಅನ್ಯಾಯದ ವಿರುದ್ಧ ಜಾಗೃತನಾಗುತ್ತಾನೆ. ಇದು ಧರ್ಮ-ಕರ್ಮದಲ್ಲಿಯೂ ಶ್ರದ್ಧೆ ಹುಟ್ಟಿಸುತ್ತದೆ. ಗುರುವಿನ ಪ್ರಭಾವ ಹೆಚ್ಚಿಸಲು ಮತ್ತು ಅದರ ಅಶುಭ ಫಲಗಳನ್ನು ಕೊನೆಗಾಣಿಸಲು ಈ ರತ್ನವನ್ನು ಧರಿಸಲಾಗುತ್ತದೆ.

ರಾಜಕಾರಣಿಗಳು, ಅಧಿಕಾರಿಗಳು, ನ್ಯಾಯಾಧೀಶರು, ಮಂತ್ರಿಗಳು, ರಾಜನಾಯಕರು, ನಟರು ಮುಂತಾದವರ ಕೈಯಲ್ಲಿ ಈ ರತ್ನವನ್ನು ಕಾಣಬಹುದು. ಈ ರತ್ನದೊಂದಿಗೆ ಮಾಣಿಕ್ಯವನ್ನೂ ಧರಿಸಿದರೆ, ಅತಿ ಶುಭ ಫಲ ದೊರೆಯುತ್ತದೆ.

ವೆಬ್ದುನಿಯಾವನ್ನು ಓದಿ