ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 18 ಜನವರಿ 2019 (08:29 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಕಿರಿ ಕಿರಿ ಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಕಾರ್ಯದೊತ್ತಡ ಹೆಚ್ಚಾಗುವುದು. ದೃಢ ನಿಲುವಿನಿಂದ ಮುಂದುವರಿಯಬೇಕಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿರುತ್ತದೆ.

ವೃಷಭ: ಪ್ರಯತ್ನಬಲವಿಲ್ಲದೇ ಉದ್ಯೋಗದಲ್ಲಿ ನಿರೀಕ್ಷಿತ ಮುನ್ನಡೆ ಲಭಿಸದು. ಆದರೆ ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಹೆಚ್ಚುವುದು. ಪ್ರಶಂಸೆಗೊಳಗಾಗುವಿರಿ.  ಮನೆಯವರೊಂದಿಗೆ ಕಲಹ ಮಾಡಿಕೊಳ್ಳದಂತೆ ಎಚ್ಚರವಹಿಸಿ.

ಮಿಥುನ: ನೆಂಟರೊಡನೆ ವಾಗ್ವಾದಕ್ಕಿಳಿಯಬೇಕಾದೀತು. ಆದರೆ ನಿಮ್ಮ ಕಾರ್ಯಶೀಲತೆಯನ್ನು ಸಮಾಜ ಗುರುತಿಸಲಿದೆ. ವಿನಾಕಾರಣ ಹತ್ತಿರದವರನ್ನೇ ಸಂಶಯಿಸುವ  ಅಭ್ಯಾಸ ಬಿಡಿ. ಬೇಡದ ಯೋಚನೆಯಿಂದ ಸಂಬಂಧ ಹಾಳಾಗಬಹುದು.

ಕರ್ಕಟಕ: ನಿಮ್ಮ ಸಮಸ್ಯೆಗಳಿಗೆ ನೀವೇ ಜವಾಬ್ಧಾರರು. ಅದನ್ನು ನೀವೇ ಪರಿಹರಿಸಿಕೊಳ್ಳುವುದು ಒಳ್ಳೆಯದು. ಆರ್ಥಿಕವಾಗಿ ಸಾಕಷ್ಟು ಲಾಭ ಗಳಿಸುವಿರಿ. ಕಾರ್ಯಕ್ಷೇತ್ರದಲ್ಲಿ ಕೈಗೊಂಡ ಕಾರ್ಯಗಳಿಗೆ ಜಯ.

ಸಿಂಹ: ದುಡುಕಿನ ವರ್ತನೆ ತೋರಿದರೆ ನಿಮಗೇ ತೊಂದರೆ. ಉದ್ಯೋಗದಲ್ಲಿ ಕೊಂಚ ಅಡೆತಡೆಗಳು ತೋರಿಬಂದಾವು. ಆದರೆ ಸಂಗಾತಿಯ ಸಹಕಾರ ಸಿಗಲಿದೆ. ಆತ್ಮವಿಶ್ವಾಸದಿಂದ ಸಮಸ್ಯೆ ಎದುರಿಸಿದರೆ ಎಲ್ಲಾ ಅಡೆತಡೆ್ಗಳೂ ನಿವಾರಣೆಯಾಗುವುದು.

ಕನ್ಯಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಮಾಡುವ ಯೋಗವಿದೆ. ಮನೆಯಲ್ಲಿ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ಆದರೆ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

ತುಲಾ: ಅನಿರೀಕ್ಷಿತವಾಗಿ ಬರುವ ನೆಂಟರಿಂದ ಶುಭ ಸುದ್ದಿ ಕೇಳುತ್ತೀರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಕೈಗೊಂಡ ಕಾರ್ಯಗಳು ಸುಸೂತ್ರವಾಗಿ ನೆರವೇರಲಿದೆ. ಮನೆಯಲ್ಲಿ ನೆಮ್ಮದಿಯ ವಾತರವರಣವಿರಲಿದೆ.

ವೃಶ್ಚಿಕ: ಆರ್ಥಿಕವಾಗಿ ಇಂದು ಸಾಕಷ್ಟು ಲಾಭಗಳಿಸುತ್ತೀರಿ. ಆದರೆ ಹಿತ ಶತ್ರುಗಳಿಂದ ವಂಚನೆಗೊಳಗಾಗುವ ಸಂಭವವಿದೆ. ಹೆಚ್ಚಿನ ಪರಿಶ್ರಮವಿದ್ದಲ್ಲಿ ಮಾತ್ರ ಯಶಸ್ಸು ಸಿಗಲಿದೆ.

ಧನು: ಸಹೋದರರ ಬಗ್ಗೆ ಅಸಮಾಧಾನ ಹೊಗೆಯಾಡುವುದು. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಪ್ರೇಮಿಗಳಿಗೆ ಶುಭ ದಿನ. ಅವಿವಾಹಿತರಿಗೆ ಹೊಸ ವಿವಾಹ ಪ್ರಸ್ತಾಪಗಳು ಬರುವುದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಕಾಳಜಿ ಅಗತ್ಯ.

ಮಕರ: ಖರ್ಚುವೆಚ್ಚಗಳ ಬಗ್ಗೆ ಹಿಡಿತವಿಡಬೇಕಾದ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗಬಹುದು. ಉದ್ಯೋಗದಲ್ಲಿ ಮೇಲಧಿಕಾರಿಗಳ ಸಹಕಾರ ಸಿಕ್ಕಿ ಮುನ್ನಡೆ ಸಾಧಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಕುಂಭ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಬಂಧು ಮಿತ್ರರಿಂದ ನಿಮ್ಮ ಕೆಲಸಕ್ಕೆ ಸಹಕಾರ ಸಿಗಲಿದೆ. ದೂರ ಸಂಚಾರ ಮಾಡುವಿರಿ. ವಾಹನ ಚಲಾವಣೆ ಮಾಡುವಾಗ ಎಚ್ಚರ. ಪ್ರೇಮಿಗಳಿಗೆ ಇಂದು ಅಷ್ಟೊಂದು ಶುಭ ದಿನವಲ್ಲ.

ಮೀನ: ಉದ್ಯೋಗದಲ್ಲಿ ನಿಧಾನಕ್ಕೆ ಚೇತರಿಕೆ, ಅಭಿವೃದ್ಧಿ ಕಾಣುತ್ತೀರಿ. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧ ಬರುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹೆಚ್ಚಿನ ಫಲಗಳಿಗಾಗಿ ಕುಲದೇವರ ಪ್ರಾರ್ಥನೆ ಅಗತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ