ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 7 ಆಗಸ್ಟ್ 2019 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಕಾಣುವಿರಿ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು ತಪ್ಪದು. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಹೊಸ ಕೆಲಸಗಳಿಗೆ ಚಾಲನೆ ನೀಡಲು ಹೇಳಿ ಮಾಡಿಸಿದ ದಿನ. ಆರ್ಥಿಕವಾಗಿ ಸಾಕಷ್ಟು ಧನಾಗಮನವಾಗಲಿದೆ. ಸರಕಾರಿ ಕೆಲಸಗಳಲ್ಲಿ ಜಯ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ಮಿಥುನ: ಕೃಷಿ ಕ್ಷೇತ್ರದಲ್ಲಿರುವವರಿಗೆ ಸಾಕಷ್ಟು ಲಾಭ ಗಳಿಸುವ ಸಮಯವಿದು. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಖರ್ಚು ವೆಚ್ಚಗಳಲ್ಲಿ ಹಿಡಿತ ಅಗತ್ಯ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಕರ್ಕಟಕ: ಸಾಂಸಾರಿಕವಾಗಿ ಎಚ್ಚರಿಕೆಯಿಂದ ನಡೆದುಕೊಳ್ಳಬೇಕಾದ ಸಮಯವಿದು. ದುಡುಕು ಮಾತಿನಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ.ಅಧಿಕಾರಿ ವರ್ಗದವರಿಗೆ ವರ್ಗಾವಣೆ ಸಾಧ್ಯತೆಯಿದೆ.

ಸಿಂಹ: ನಿಂತು ಹೋಗದ್ದ ಕೆಲಸಗಳಿಗೆ ಮತ್ತೆ ಚಾಲನೆ ನೀಡುವಿರಿ. ಅಚ್ಚರಿಯ ರೀತಿಯಲ್ಲಿ ಸಹಾಯ ಒದಗಿಬರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ದೊರಕುವುದು. ಧನಾರ್ಜನೆಗೆ ನಾನಾ ಮಾರ್ಗ ಹುಡುಕುವಿರಿ.

ಕನ್ಯಾ: ಸಾಂಸಾರಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಹಾಗಿದ್ದರೂ ಸಂತೋಷಕ್ಕೆ ಕೊರತೆಯಾಗದು. ಹೊಸ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಹೂಡಿಕೆ ವ್ಯವಹಾರಗಳಲ್ಲಿ ಲಾಭ ಗಳಿಸುವಿರಿ. ಮನೋಕಾಮನೆಗಳನ್ನು ಪೂರ್ತಿ ಮಾಡುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಉತ್ತಮ. ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ.

ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಉದಾಸೀನ ಪ್ರವೃತ್ತಿ ಕಂಡುಬರುವುದು. ಕೆಲಸ ಕಾರ್ಯಗಳಲ್ಲಿ ಅಡಚಣೆಯಾಗಬಹುದು. ಆದರೆ ಧೈರ್ಯ ಕಳೆದುಕೊಳ್ಳಬೇಡಿ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.

ಧನು: ಮನೆಗೆ ಹೊಸ ಅತಿಥಿಗಳು, ಸದಸ್ಯರ ಆಗಮನವಾಗಲಿದೆ. ಹಾಗಿದ್ದರೂ ಮನಸ್ಸಿಗೆ ಏನೋ ಒಂದು ರೀತಿಯ ಬೇಸರ ಕಾಡುವುದು. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಎಚ್ಚರಿಕೆ ವಹಿಸಿ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ.

ಮಕರ: ಮನಸ್ಸಿ ನೆಮ್ಮದಿ ಭಂಗವಾಗುವಂತಹ ಘಟನೆಗಳು ನಡೆಯಬಹುದು. ಆದರೆ ಆರ್ಥಿಕವಾಗಿ ಮುನ್ನಡೆ ಗಳಿಸುತ್ತೀರಿ. ಹಣಕಾಸಿಗೆ ತೊಂದರೆಯಾಗದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ಮಾಡುವಿರಿ.

ಕುಂಭ: ವಿಘ್ನಗಳಿದ್ದರೂ ಕಾರ್ಯ ಸಾಧನೆಗೆ ತೊಂದರೆಯಾಗದು. ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಎಚ್ಚರಿಕೆ ವಹಿಸಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ವಿಳಂಬವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮೀನ: ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ವೃತ್ತಿರಂದಲ್ಲಿ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ