ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 9 ಆಗಸ್ಟ್ 2019 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮೇಲಧಿಕಾರಿಗಳ ಕಿರಿ ಕಿರಿಯಿಂದ ಕೀಳರಿಮೆ ಮೂಡುವುದು. ಸಂಗಾತಿಯೊಂದಿಗೆ ವಿನಾಕಾರಣ ಮನಸ್ತಾಪ ಮಾಡಿಕೊಳ್ಳುವಿರಿ. ದುಡುಕಿನ ವರ್ತನೆ ತೋರಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ವೃಷಭ: ಕೃಷಿ ಕ್ಷೇತ್ರದಲ್ಲಿರುವವರಿಗೆ ಅಡೆತಡೆಗಳು ನಿವಾರಣೆಯಾಗಿ ನಿವ್ವಳ ಲಾಭ ಸಿಗಲಿದೆ. ಅನವಶ್ಯಕ ವಾದ ವಿವಾದಗಳಿಂದ ದೂರವಿರುವುದೇ ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಂಭೀರವಾಗಿ ಗಮನಕೊಡಬೇಕಾದ ಸಮಯವಿದು.

ಮಿಥುನ: ದುಡುಕು ವರ್ತನೆಯಿಂದ ಕಾರ್ಯದಲ್ಲಿ ಹಿನ್ನಡೆ ಅನುಭವಿಸಲಿದ್ದೀರಿ. ಹಿರಿಯರಿಂದ ಬಂದ ಬಳವಳಿಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಕರ್ಕಟಕ: ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಮಾಡುವ ಅವಕಾಶಗಳಿವೆ. ಹೊಸ ಜನರ ಭೇಟಿಯಿಂದ ಹೊಸ ವಿಚಾರಗಳು ಹೊಳೆಯಲಿವೆ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾಗಬಹುದು.

ಸಿಂಹ: ಮಹಿಳೆಯರ ಅಸಮಾಧಾನಕ್ಕೆ ಗುರಿಯಾಗುವಿರಿ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗುವುದು. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಅಧಿಕ ಕಾರ್ಯದೊತ್ತಡವಿರಲಿದೆ.

ಕನ್ಯಾ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಹಾಗಿದ್ದರೂ ಮನಸ್ಸಿಗೆ ತೃಪ್ತಿಯಾಗದು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನ ಮನಸ್ಸಿಗೆ ಖುಷಿ ನೀಡುವುದು. ಖರ್ಚು ವೆಚ್ಚಗಳ ಬಗ್ಗೆ ಗಮನವಿರಲಿ.

ತುಲಾ: ಹಿರಿಯರೊಡನೆ ಅನಗತ್ಯ ವಾದ ವಿವಾದಗಳನ್ನು ಮಾಡಿಕೊಳ‍್ಳಬೇಡಿ. ಕೃಷಿ ಕ್ಷೇತ್ರದಲ್ಲಿರುವವರು ನಷ್ಟ ಅನುಭವಿಸಬೇಕಾಗುತ್ತದೆ. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸುವಿರಿ.

ವೃಶ್ಚಿಕ: ಅಂದುಕೊಂಡ ಕಾರ್ಯಗಳಿಗೆ ಹಣಕಾಸಿನ ತೊಂದರೆಗಳು ಎದುರಾಗಲಿವೆ. ಸಾಂಸಾರಿಕವಾಗಿ ಸಂಗಾತಿಯ ಆರೋಗ್ಯ ಹದತಪ್ಪಬಹುದು. ನಿರುದ್ಯೋಗಿಗಳಿಗೆ ಹೊಸ ಉದ್ಯೋಗವಾಕಾಶಗಳು ಎದುರಾಗಲಿವೆ.

ಧನು: ಸಾಂಸಾರಿಕವಾಗಿ ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಖರ್ಚು ವೆಚ್ಚಗಳು ಅಧಿಕವಾಗಲಿದೆ. ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಗಳಿಸುವಿರಿ. ಹೊಸ ವಾಹನ ಖರೀದಿಗೆ ಮುಂದಾಗುವಿರಿ.

ಮಕರ: ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಆದರೆ ಆದಾಯಕ್ಕೆ ಕೊರೆತೆಯಿರದು. ಅಧಿಕಾರಿ ವರ್ಗದವರಿಗೆ ಮುನ್ನಡೆಯ ಯೋಗವಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರವುದು.

ಕುಂಭ: ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ಸಹೋದ್ಯೋಗಿಗಳು ನಿಮ್ಮ ಏಳಿಗೆಗೆ ಅಸೂಯೆಪಡುವರು. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಮೀನ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರಕುವುದು. ನ್ಯಾಯಾಲಯ ಕಾರ್ಯ ಕಲಾಪಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರಲಿದೆ. ವೃತ್ತಿರಂಗದಲ್ಲಿ ಕ್ರಿಯಾಶೀಲತೆ ಹೆಚ್ಚಿಸಬೇಕಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ