ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 24 ಆಗಸ್ಟ್ 2019 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹೋಪಯೋಗಿ ವಸ್ತುಗಳ ಖರೀದಿ ಯೋಗವಿದೆ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಸಂಗಾತಿ ಜತೆಗೆ ಅಸಮಾಧಾನವಾಗುವುದು. ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ.

ವೃಷಭ: ಧನಾಗಮನ ವೃದ್ಧಿಸಲಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ವೃತ್ತಿ ರಂಗದಲ್ಲಿ ಉನ್ನತ ಸ್ಥಾನ ಮಾನ ಲಭ‍್ಯವಾಗುವುದು. ಅಧಿಕಾರಿ ವರ್ಗದವರಿಗೆ ಮುನ್ನಡೆ ಯೋಗವಿದೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮಿಥುನ: ಮೇಲ್ವರ್ಗದ ಅಧಿಕಾರಿಗಳಿಗೆ ವೇತನ ಹೆಚ್ಚಳ ಸಂಭವ. ಅನಿರೀಕ್ಷಿತವಾಗಿ ಮನೆಗೆ ಅತಿಥಿಗಳ ಆಗಮನವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ದೇವತಾ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ಅವಿವಾಹಿತ ಸ್ತ್ರೀಯರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.ಕಲಾ ಕ್ಷೇತ್ರದಲ್ಲಿರುವವರಿಗೆ ಉನ್ನತ ಸ್ಥಾನ ಮಾನ ಲಭ‍್ಯವಾಗಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ.

ಸಿಂಹ: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಸಿಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಯಾರಿಗೂ ಈ ದಿನ ಸಾಲ ಕೊಡಲು ಹೋಗಬೇಡಿ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕನ್ಯಾ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಅನಿರೀಕ್ಷಿತ ರೂಪದಲ್ಲಿ ಖರ್ಚು ವೆಚ್ಚಗಳು ಎದುರಾಗಲಿವೆ. ದೈಹಿಕ ಆರೋಗ್ಯದಲ್ಲಿ ಏರುಪೇರಾಗಬಹುದು. ಉದ್ಯೋಗದಲ್ಲಿ ವರ್ಗಾವಣೆಯ ಭೀತಿಯಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಬರಲಿವೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರಲಿದೆ. ದೈಹಿಕ ಆರೋಗ್ಯದಲ್ಲಿ ಏರುಪೇರಾಗಬಹುದು.

ವೃಶ್ಚಿಕ: ದೇವತಾ ದರ್ಶನದಿಂದ ಮನಸ್ಸಿಗೆ ನೆಮ್ಮದಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರಾಸಕ್ತಿ ಉಂಟಾದೀತು. ಸಾಂಸಾರಿಕವಾಗಿ ಸಂತಸದ ದಿನಗಳು ನಿಮ್ಮದಾಗಲಿವೆ. ಅನಿರೀಕ್ಷಿತವಾಹಿ ಹಳೆಯ ಮಿತ್ರನ ಭೇಟಿ ಸಾಧ್ಯತೆ. ಆರೋಗ್ಯದಲ್ಲಿ ಎಚ್ಚರಿಕೆಯಿರಲಿ.

ಧನು: ರಾಜಕೀಯ ರಂಗದಲ್ಲಿ ಉತ್ತಮ ಸ್ಥಾನ ಮಾನ ಲಭ‍್ಯವಾಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ನಿಮ್ಮ ಆರೋಗ್ಯದಲ್ಲಿ ಸುಧಾರಣೆಯಾಗುವುದು. ಆಸ್ತಿ ಖರೀದಿಗೆ ಚಿಂತನೆ ನಡೆಸುವಿರಿ.

ಮಕರ: ನೂತನ ವೃತ್ತಿಯಲ್ಲಿ ಮುನ್ನಡೆಯಾಗಲಿದೆ. ಸಾಕಷ್ಟು ಧನಾಗಮನವಾಗುವುದರಿಂದ ಅಂದುಕೊಂಡ ಕಾರ್ಯ ಸುಗಮವಾಗಿ ನೆರವೇರಿಸುವಿರಿ. ಸಾಂಸಾರಿಕವಾಗಿ ಸಂತಸದ ಕ್ಷಣ ನಿಮ್ಮದಾಗುವುದು. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಕುಂಭ: ದಾಯಾದಿಗಳೊಂದಿಗೆ ಆಸ್ತಿ ವಿಚಾರವಾಗಿ ವಾಗ್ವಾದವಾಗುವ ಸಾಧ್ಯತೆಯಿದೆ. ಮನೆಯಲ್ಲಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು.

ಮೀನ: ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾಗಲಿವೆ. ವ್ಯಾಪಾರಿಗಳಿಗೆ ನಿವ್ವಳ ಲಾಭ ಸಿಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ