ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 31 ಆಗಸ್ಟ್ 2019 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ನಿವಾರಣೆಯಾಗಿ ನೆಮ್ಮದಿ ಸಿಗಲಿದೆ. ಭೂಮಿ, ಮನೆ ಖರೀದಿ ವ್ಯವಹಾರ ಮಾಡಲು ಇದು ಉತ್ತಮ ದಿನ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಷಭ: ದಾಯಾದಿಗಳ ವೈಷಮ್ಯಕ್ಕೆ ಕೊನೆ ಹಾಡಲು ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಆರೋಗ್ಯ ಸಮಸ್ಯೆಯಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರುವುದು. ಆದಾಯವಿದ್ದಷ್ಟೇ ಖರ್ಚೂ ಇರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗುವುದು.

ಮಿಥುನ: ಆರ್ಥಿಕವಾಗಿ ನಿವ್ವಳ ಲಾಭ ಸಿಗುವುದರಿಂದ ಆದಾಯಕ್ಕೆ ಕೊರತೆಯಿರದು. ಆದರೆ ವಿಶ್ವಾಸಕ್ಕೆ ದ್ರೋಹ ಬಗೆಯುವವರು ನಿಮ್ಮ ಬೆನ್ನ ಹಿಂದೆಯೇ ಇರುವರು. ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರಿಕೆ. ಸಂಚಾರದಲ್ಲಿ ಜಾಗ್ರತೆ ವಹಿಸಿ.

ಕರ್ಕಟಕ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡಬಂದೀತು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತಸವಾಗುವುದು. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕಿಳಿಸಲು ಇದು ಸಕಾಲ. ಕಾರ್ಯನಿಮಿತ್ತ ಅಧಿಕ ಓಡಾಟವಿರುತ್ತದೆ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಅನಿರೀಕ್ಷಿತವಾಗಿ ನೆಂಟರ ಆಗಮನವಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರುವುದು. ಖರ್ಚಿನ ಬಗ್ಗೆ ಹಿಡಿತವಿರಲಿ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ.

ಕನ್ಯಾ: ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಎದುರಾಗಲಿವೆ. ಹಾಗಿದ್ದರೂ ನೀವು ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಆರೋಗ್ಯದಲ್ಲಿ ಏರುಪೇರಾಗಬಹುದು ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ತುಲಾ: ಧಾರ್ಮಿಕ ಕಾರ್ಯಗಳನ್ನು ನೆರವೇರಿಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಉದ್ಯೋಗ ರಂಗದಲ್ಲಿ ಉತ್ತಮ ಅವಕಾಶಗಳು ಎದುರಾಗಲಿವೆ. ಕೃಷಿಕರಿಗೆ ಕೊಂಚ ಹಿನ್ನಡೆಯಾಗಬಹುದು. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಎಲ್ಲವೂ ನೀವು ಅಂದುಕೊಂಡಂತೆ ನೆರವೇರಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡುವರು. ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಖರ್ಚಿನ ಬಗ್ಗೆ ಹಿಡಿತವಿರಲಿ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿ ಮಾಡುವುದು ಅಗತ್ಯ. ನಿಮ್ಮ ಅದೃಷ್ಟ ಚೆನ್ನಾಗಿದ್ದು, ನೀವು ಅಂದುಕೊಂಡ ಕಾರ್ಯಗಳು ನಿಮಗೆ ಬೇಕಾದ ರೀತಿಯಲ್ಲಿ ನೆರವೇರಲಿದೆ. ಚಾಡಿ ಮಾತುಗಳನ್ನು ಅಲಕ್ಷಿಸುವುದು ಒಳ್ಳೆಯದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದುವೇ ಸಕಾಲ. ಆರಂಭಿಕ ವಿಘ್ನಗಳನ್ನು ದೂರ ಮಾಡಲು ಕುಲದೇವರ ಪ್ರಾರ್ಥನೆ ಮಾಡಿ. ಮಕ್ಕಳ ಭವಿಷ್ಯದ ಬಗ್ಗೆ ಹೊಸ ಯೋಜನೆ ರೂಪಿಸುವಿರಿ. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯವಾಗುವುದು.

ಕುಂಭ: ಸಂಗಾತಿಯ ಅನಾರೋಗ್ಯ ಚಿಂತೆಗೀಡು ಮಾಡುವುದು. ಕೌಟುಂಬಿಕವಾಗಿ ಕೆಲವೊಂದು ಮಹತ್ವದ ಜವಾಬ್ಧಾರಿಗಳು ಹೆಗಲಿಗೇರಲಿವೆ. ಆದಾಯವಿದ್ದಷ್ಟೇ ಖರ್ಚೂ ಬರಲಿದೆ. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕಿದೆ. ವಾಹನ ಸವಾರರು ಚಾಲನೆ ಸಮಯದಲ್ಲಿ ಎಚ್ಚರವಿರಬೇಕು.

ಮೀನ: ನಿರೀಕ್ಷಿತ ರೀತಿಯಲ್ಲಿ ಕೆಲಸ ಕಾರ್ಯಗಳು ನೆರವೇರುವುದರಿಂದ ಚಿಂತೆ ಮಾಡಬೇಕಾಗಿಲ್ಲ. ಮಹಿಳಾ ಉದ್ಯೋಗಿಗಳಿಗೆ ಶುಭ ಫಲಗಳಿವೆ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಅವಿವಾಹಿತರ ವಿವಾಹ ಪ್ರಯತ್ನದಲ್ಲಿ ಯಶಸ್ಸು ಸಿಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ