ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 18 ಸೆಪ್ಟಂಬರ್ 2019 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂಗಾತಿಯೊಂದಿಗಿನ ಮನಸ್ತಾಪಗಳು ನಿಧಾನವಾಗಿ ದೂರವಾಗುವುದು. ಮನೆಯಲ್ಲಿ ನೆಮ್ಮದಿಯ ವಾತಾವರಣವಿರುವುದು. ಹಾಗಿದ್ದರೂ ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಆರ್ಥಿಕವಾಗಿ ಹಣದ ಮುಗ್ಗಟ್ಟುಗಳು ನಿವಾರಣೆಯಾಗಿ ನಿಧಾನವಾಗಿ ಚೇತರಿಕೆ ಕಂಡುಬರುವುದು. ಹೊಸ ವಸ್ತು, ಮನೆ, ಆಸ್ತಿ ಖರೀದಿಗೆ ಚಿಂತನೆ ನಡೆಸುವಿರಿ. ಸ್ವ ಉದ್ಯೋಗಿಗಳಿಗೆ, ವ್ಯಾಪಾರಿಗಳಿಗೆ ಮುನ್ನಡೆಯಿರಲಿದೆ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರಬಹುದು.

ಮಿಥುನ: ಕುಟುಂಬ ಸದಸ್ಯರೊಂದಿಗೆ ವಿನೋದ ಯಾತ್ರೆ ಕೈಗೊಳ್ಳಲಿದ್ದೀರಿ. ಈ ದಿನ ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಕೆಳ ಹಂತದ ನೌಕರರಿಗೆ ಬಡ್ತಿ, ವೇತನ ಹೆಚ್ಚಳ ಸಾಧ್ಯತೆಯಿದೆ. ಅಧಿಕಾರಿ ವರ್ಗದವರಿಗೆ ಕಾರ್ಯದೊತ್ತಡ ಹೆಚ್ಚುವುದು. ಧಾರ್ಮಿಕ ಕಾರ್ಯಗಳಿಗಾಗಿ ಹೆಚ್ಚಿನ ಧನವಿನಿಯೋಗ ಮಾಡುವಿರಿ. ಸ್ವ ಹಿತದ ಬಗ್ಗೆ ಹೆಚ್ಚಿನ ಆಸ್ಥೆ ವಹಿಸುವಿರಿ.

ಸಿಂಹ: ಸಾಮಾಜಿಕವಾಗಿ ನೀವು ಮಾಡುವ ಕೆಲಸಗಳಿಗೆ ಜನಮನ್ನಣೆ ಸಿಗುವುದು. ಹೊಸ ಮಿತ್ರರ ಭೇಟಿ ಅವಕಾಶವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕನ್ಯಾ: ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಖರ್ಚು ವೆಚ್ಚಗಳು ಹೆಚ್ಚಾಗುವುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರಕಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರುವುದು. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ತುಲಾ: ಆರ್ಥಿಕವಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬ ಸ್ಥಿತಿ ನಿರ್ಮಾಣವಾಗುವುದು. ಚಾಡಿ ಮಾತುಗಳು ಕೇಳಿಬಂದೀತು. ಉದ್ಯೋಗ ಕ್ಷೇತ್ರದಲ್ಲಿ ಹೊಸ ಶತ್ರುಗಳು ಸೃಷ್ಟಿಯಾಗುವರು. ಬಹಳ ತಾಳ್ಮೆಯಿಂದಿರಬೇಕಾದ ದಿನವಿದು.

ವೃಶ್ಚಿಕ: ವ್ಯವಹಾರ ಕ್ಷೇತ್ರದಲ್ಲಿ ವಂಚನೆಯ  ಅನುಭವವಾಗಲಿದೆ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿದೆ. ಕೌಟುಂಬಿಕವಾಗಿ ನೆಮ್ಮದಿಯಿರುತ್ತದೆ.

ಧನು: ದೂರ ಪ್ರಯಾಣದಿಂದ ದೇಹಾಯಾಸವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಮನೆಯ ಸ್ಥಿತಿ ಗತಿ ಬಗ್ಗೆ ಚಿಂತೆಯಾಗುವುದು. ಹಾಗಿದ್ದರೂ ಮಕ್ಕಳಿಂದ ಸಂತಸದ ವಾರ್ತೆ ಕೇಳುವಿರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.

ಮಕರ: ಪಾಲು ಬಂಡವಾಳ ವ್ಯವಹಾರದಲ್ಲಿ ನಿವ್ವಳ ಲಾಭ ಗಳಿಸುವಿರಿ. ಅವಿವಾಹಿತರ ವಿವಾಹ ಪ್ರಯತ್ನದಲ್ಲಿ ಸಫಲತೆ ಕಂಡುಬರುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ಕುಂಭ: ಕೌಟುಂಬಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ನೀವು ಬಯಸಿದ್ದು ನಿಮ್ಮ ಕೈಗೆಟುಕುವುದು. ಆದರೆ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅತಿಯಾಗಿ ಯಾರನ್ನೂ ನಂಬಬೇಡಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮಹಿಳಾ ಉದ್ಯೋಗಿಗಳು ತಮ್ಮ ಪರಿಶ್ರಮಕ್ಕೆ ತಕ್ಕ ಫಲ ಉಣ್ಣುವರು. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ಆದರೆ ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ವಿದ್ಯಾರ್ಥಿಗಳಿಗೆ ಸಂತಸವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ