ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 22 ಸೆಪ್ಟಂಬರ್ 2019 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೆಲಸ ಕಾರ್ಯನಿಮಿತ್ತ ಸಾಕಷ್ಟು ಓಡಾಟ ನಡೆಸಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಆದರೆ ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆರೋಗ್ಯದ ಚಿಂತೆ ಕಾಡುವುದು. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಗಮನಕೊಡಬೇಕಾಗುವುದು.

ವೃಷಭ: ಮಕ್ಕಳ ಓದಿನ ಬಗ್ಗೆ ಹೆಚ್ಚಿನ ಗಮನಕೊಡಬೇಕಾಗುತ್ತದೆ. ಹೊಸ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಹಿರಿಯರೊಡನೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ಬಂಧು ಮಿತ್ರರ ಆಗಮನವಾಗಲಿದೆ.

ಮಿಥುನ: ಸಂಚಾರದಿಂದ ದೇಹಾರೋಗ್ಯದಲ್ಲಿ ವ್ಯತ್ಯಯವಾಗಬಹುದು. ನೆರೆಯವರ ಚಾಡಿ ಮಾತಿಗೆ ಕಿವಿಗೊಡಬೇಡಿ. ಆತ್ಮಸ್ಥೈರ್ಯ ತಂದಿಕೊಳ್ಳಬೇಕು. ಮನೆಯಲ್ಲಿ ನೆರೆವೇರಿಸಬೇಕೆಂದಿದ್ದ ಶುಭ ಕಾರ್ಯಗಳಿಗೆ ವಿಘ‍್ನಗಳು ಎದುರಾಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಹೊಸ ವಾಹನ ಖರೀದಿ ಯೋಗವಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಮುನ್ನಡೆ ಕಂಡು ಸಂತೋಷವಾಗುವುದು. ಆದಾಯವಿದ್ದಷ್ಟೇ ಖರ್ಚೂ ಇರುವುದು. ಆಸ್ತಿ ವಿಚಾರದಲ್ಲಿ ದಾಯಾದಿಗಳೊಂದಿಗನ ಮನಸ್ತಾಪಗಳು ದೂರವಾಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ.

ಸಿಂಹ: ಹಳೆಯ ಆರೋಗ್ಯ ಸಮಸ್ಯೆ ಕಾಡುವುದು. ಮನಸ್ಸಿಗೆ ಬೇಡದ ಯೋಚನೆಗಳು ಬಂದು ಒಂದು ರೀತಿಯ ಬೇಸರ ಮೂಡುವುದು. ಕಾರ್ಮಿಕ ವರ್ಗದವರಿಗೆ ಮುನ್ನಡೆಯಿರುತ್ತದೆ. ಸಂಗಾತಿಯ ಸಹಕಾರ ಸಿಗುವುದು. ಆಪ್ತೇಷ್ಟರೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ.

 
ಕನ್ಯಾ: ವ್ಯಾಪಾರ ವಹಿವಾಟಿನಲ್ಲಿ ಕೆಲವು ಮುನ್ನಡೆಗೆ ಸಹಕಾರಿಯಾಗುವ  ದಾರಿಗಳು ಸಿಗುವುದು. ಆಸ್ತಿ ವಿಚಾರದಲ್ಲಿ ನಿಮಗೆ ಅನುಕೂಲಕರವಾದ ತೀರ್ಪು ಬರುವುದು. ರಾಜಕೀಯ ರಂಗದಲ್ಲಿ ಮುನ್ನಡೆ ತೋರಿಬರಲಿದೆ. ಆಪ್ತೇಷ್ಟರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗುವುದು.

ತುಲಾ: ವ್ಯಾಪಾರ ವಹಿವಾಟಿನಲ್ಲಿ ನಂಬಿದವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಆದಾಯ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇಡಿ. ಅನವಶ್ಯಕವಾಗಿ ದುಡುಕಿ ಮಾತನಾಡಿ ಕೆಲಸದಲ್ಲಿ ಗೊಂದಲ ಸೃಷ್ಟಿಸಿಕೊಳ್ಳಬೇಡಿ. ಸಮಾಧಾನದಿಂದ ಇರಿ.

ವೃಶ್ಚಿಕ: ಸಂಗಾತಿಯ  ಕೆಲಸಗಳಲ್ಲಿ ಮುನ್ನಡೆ ತೋರಿಬರಲಿದ್ದು, ಅವರ ಪ್ರಗತಿ ನಿಮ್ಮ ಮನಸ್ಸಿಗೆ ಸಂತಸ ತರುವುದು. ಆದರೆ ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ನೂತನ ದಂಪತಿಗಳಿಗೆ ಪ್ರವಾಸ ಯೋಗವಿದೆ.

ಧನು: ವ್ಯವಹಾರ ಉತ್ತಮವಾಗಿದ್ದರೂ ಸಾಕಷ್ಟು ಆದಾಯ ಕೈಗೆ ಬರುತ್ತಿಲ್ಲ ಎಂಬ ಚಿಂತೆ ಕಾಡುವುದು. ವ್ಯವಹಾರ ಮತ್ತು ಸಂಬಂಧದ ವಿಚಾರದಲ್ಲಿ ಸಮತೋಲನ ಕಾಯ್ದುಕೊಳ್ಳಬೇಕಾಗುವುದು. ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಕಿರು ಸಂಚಾರ ಯೋಗವಿದೆ.

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿಯಾಗುವುದು. ನಿಮ್ಮ ಕೆಲಸದಲ್ಲಿ ಉನ್ನತಿ ತೋರಿಬರುವುದು. ಹೊಸ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡುವಿರಿ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ಕುಂಭ: ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ನಾಲಿಗೆ ಚಪಲದಿಂದಾಗಿ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಅವಸರ ಮಾಡಬೇಡಿ. ಶಾಂತಿ ಸಮಾಧಾನ ಅತೀ ಅಗತ್ಯ.

ಮೀನ: ವಿದ್ಯಾರ್ಥಿಗಳು ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಸಂಚಾರದಿಂದ ಕಾರ್ಯ ಸಿದ್ಧಿಯಾಗುವುದು. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ