ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 4 ಅಕ್ಟೋಬರ್ 2019 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅಡೆತಡೆಗಳಿಂದಾಗಿ ನಿಮ್ಮ ಕೆಲಸ ಕಾರ್ಯಗಳು ವಿಳಂಬ ಗತಿಯಲ್ಲಿ ನಡೆಯಲಿವೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ರಾಜಕೀಯ ರಂಗದವರಿಗೆ ಪ್ರತಿಸ್ಪರ್ಧಿಯ ಪ್ರತಿರೋಧ ತೋರಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ವೃಷಭ: ಕೌಟುಂಬಿಕ ಸಮಸ್ಯೆಗಳಿಗೆ ಮನಸ್ಸಿಗೆ ಕಿರಿ ಕಿರಿಯಾಗುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯ ಕೊರತೆ ತೋರಿಬರಲಿದೆ. ದೇವತಾ ಪ್ರಾರ್ಥನೆ, ದೇವಾಲಯ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿಯಾಗುವುದು. ನೂತನ ಕೆಲಸ ಕಾರ್ಯಗಳಿಗೆ ಚಾಲನೆ ನೀಡುವಿರಿ.

ಮಿಥುನ: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನಿರೀಕ್ಷಿತ ಫಲಿತಾಂಶ ಬರಲಿದೆ. ದೇವತಾ ದರ್ಶನದಿಂದ ಮನಸ್ಸಿಗೆ ಸಂತಸವಾಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ಲಾಭವಾಗಲಿದೆ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿವೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ಬಡ್ತಿ ಯೋಗವಿದೆ. ಕೆಳ ಹಂತದ ನೌಕಕರರಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗುವುದು. ಮೇಲಧಿಕಾರಿಗಳಿಂದ ಪ್ರಶಂಸೆ ಸಾಧ‍್ಯತೆ.
ಆದರೆ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿ ಅಗತ್ಯ. ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

 
ಕನ್ಯಾ: ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭ ಸಿಗಬಹುದು ಆದರೆ ವಂಚನೆಗೊಳಗಾಗದಂತೆ ಎಚ್ಚರಿಕೆಯಿಂದಿರುವುದು ಮುಖ್ಯ. ಗೃಹೋಪಯೋಗಿ ವಸ್ತುಗಳ ಖರೀದಿ. ಯಂತ್ರೋಪಕರಣಗಳ ಕೆಲಸ ಮಾಡುವರಿಗೆ ಲಾಭವಾಗಲಿದೆ. ಅನಿರೀಕ್ಷಿತವಾಗಿ ದೇವಾಲಯ ಸಂದರ್ಶನ ಯೋಗವಿದೆ.

ತುಲಾ: ನಿರೀಕ್ಷಿತ ಕೆಲಸ ಕಾರ್ಯಗಳು ಅಡೆತಡೆಯಿದ್ದರೂ ಅಂದುಕೊಂಡ ರೀತಿ ನಡೆಯಲಿವೆ. ಮನೆ ರಿಪೇರಿ, ವಸ್ತುಗಳ ಖರೀದಿಗಾಗಿ ಧನವ್ಯಯವಾಗಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಸಂತಸವಾಗಲಿದೆ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬರಲಿದೆ.

ವೃಶ್ಚಿಕ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ. ಆರ್ಥಿಕವಾಗಿ ಲಾಭ-ನಷ್ಟಗಳು ಸಮಾನವಾಗಿರುವುದು. ವ್ಯಾಪಾರ ವ್ಯವಾಹರದಲ್ಲಿ ಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಸಂಗಾತಿಯ ಸಲಹೆಗೆ ಕಿವಿಗೊಡಿ.

ಧನು: ನಿಮ್ಮ ಪ್ರಯತ್ನ ಬಲದಿಂದ ಅಂದುಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿವೆ. ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ಆಹಾರ ಪದ್ಧತಿಯಿಂದ ಉದರ ಸಂಬಂಧೀ ಸಮಸ್ಯೆಗಳು ಕಾಡಬಹುದು. ದುಡುಕು ಮಾತಿಗೆ ಕಡಿವಾಣ ಹಾಕಿ.

ಮಕರ: ಸಂಗಾತಿಯ ಮನೋಕಾಮನೆಗಳನ್ನು ಪೂರ್ತಿ ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ವಿದ್ಯಾರ್ಥಿಗಳು ಬಿಡುವಿನ ದಿನದ ಸಂತಸ ಅನುಭವಿಸಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.

ಕುಂಭ: ಅವಿವಾಹಿತರಿಗೆ ಸದ್ಯದಲ್ಲೇ ಕಂಕಣ ಬಲ ಕೂಡಿಬರಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಿ. ಹಿತಶತ್ರುಗಳ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ, ವ್ಯವಹಾರದಲ್ಲಿ ಯಾರೂ ಸಹಾಯಕ್ಕೆ ಬರುತ್ತಿಲ್ಲ ಎಂಬ ಕೊರಗು ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಗುರುಬಲದಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಆರ್ಥಿಕವಾಗಿ ಧನಾಗಮನವಾಗಲಿದೆ. ನಿಶ್ಚಿತ ರೂಪದಲ್ಲಿ ಕಾರ್ಯಪ್ರಾಪ್ತಿಯಾಗಲಿದೆ. ಆಲಸ್ಯತನದಿಂದ ಕಾರ್ಯಭಂಗವಾಗಲಿದೆ. ದೂರ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವಾಹನ ಖರೀದಿ ಯೋಗವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ