ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 5 ಅಕ್ಟೋಬರ್ 2019 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಒಣ ಪ್ರತಿಷ್ಠೆಗಳಿಂದ ಪ್ರೀತಿ ಪಾತ್ರರ ಮನನೋಯಿಸುವಿರಿ. ಕಾರ್ಯಕ್ಷೇತ್ರದಲ್ಲಿ ವಿನಾಕಾರಣ ಸಮಯ ವ್ಯರ್ಥವಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಭಾಗ್ಯವಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ನಿಮ್ಮ ದುಡುಕು ಮಾತು, ಪ್ರವೃತ್ತಿಯಿಂದ ಕಾರ್ಯ ಹಾಳು. ಶುಭ ಮಂಗಲ ಕಾರ್ಯಗಳಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಸಂಸಾರದಲ್ಲಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.

ಮಿಥುನ: ಹಲವು ಅಡ್ಡಿ ಆತಂಕಗಳಿದ್ದರೂ ದೈವಾನುಕೂಲದಿಂದ ಅಂದುಕೊಂಡ ಕಾರ್ಯ ನೆರವೇರಿಸುವಿರಿ. ದಾಂಪತ್ಯದಲ್ಲಿ ವಿರಸ ಮೂಡಬಹುದು, ತಾಳ್ಮೆ ಅಗತ್ಯ. ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿದ್ದರೂ ವಂಚನೆಯ ಬಗ್ಗೆ ಎಚ್ಚರಿಕೆಯಿಂದಿರುವುದು ಅಗತ್ಯ.

ಕರ್ಕಟಕ: ನಿಮ್ಮ ಕೆಲವೊಂದು ನಿರ್ಧಾರಗಳಿಂದ ಸ್ನೇಹಿತ ವರ್ಗದವರಿಗೆ ನಿರಾಸೆಯುಂಟುಮಾಡುವಿರಿ. ವಿರಸಗಳೂ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕಿರು ಸಂಚಾರ ಸಾಧ್ಯತೆ.

ಸಿಂಹ: ಅನಿರೀಕ್ಷಿತ ರೀತಿಯಲ್ಲಿ ಅಂದುಕೊಂಡ ಕೆಲಸಗಳು ನೆರವೇರಿ ಮನಸ್ಸಿಗೆ ಖುಷಿಯಾಗುವುದು. ನಾನಾ ಮೂಲಗಳಿಂದ ಧನಾಗಮನವಾಗಲಿದೆ. ತಾಳ್ಮೆ, ಸಮಾಧಾನದಿಂದ ಮುಂದುವರಿದರೆ ವೃತ್ತಿರಂಗದಲ್ಲಿ ಮುನ್ನಡೆ ಸಿಗುವುದು. ದಿನದಂತ್ಯಕ್ಕೆ ಸಂತಸದ ವಾರ್ತೆಯಿದೆ.

 
ಕನ್ಯಾ: ಉದ್ಯೋಗಿಗಳಿಗೆ ವರ್ಗಾವಣೆಯ ಭೀತಿಯಿದೆ. ಮನೆ ಅಥವಾ ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ಅವಿವಾಹಿತರಿಗೆ ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾಗಬಹುದು. ಆದರೆ ಚಿಂತೆ ಬೇಡ. ಹಿರಿಯರ ಸಲಹೆಗಳಿಗೆ ಕಿವಿಗೊಡಿ.

ತುಲಾ: ಮೇಲ್ವರ್ಗದ ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ವೈದ್ಯಕೀಯ ವೃತ್ತಿಯವರಿಗೆ ಉನ್ನತ ಸ್ಥಾನ ಮಾನ ಸಾಧ್ಯತೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಾಗಲಿದೆ. ಆದಾಯವಿದ್ದಷ್ಟೇ ಖರ್ಚೂ ಇರುವುದು. ಹಿಡಿತ ಅಗತ್ಯ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಅನುಭವಿಸುವಿರಿ. ಇಲ್ಲ ಸಲ್ಲದ ಆರೋಪ ಎದುರಿಸುವಂತಾದೀತು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಧನು: ಕೌಟುಂಬಿಕವಾಗಿ ನೆಮ್ಮದಿಯ ದಿನಗಳು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಪಾಲು ಬಂಡವಾಳ ವ್ಯವಹಾರ ಮಾಡುವವರಿಗೆ ಸಣ್ಣ ಮಟ್ಟಿನ ಲಾಭ ಕಂಡುಬರುವುದು. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

ಮಕರ: ಆರ್ಥಿಕ ಪರಿಸ್ಥಿತಿಯಲ್ಲಿ ಗಮನಾರ್ಹ ಚೇತರಿಕೆ ಕಂಡುಬಂದು ಹಂತ ಹಂತವಾಗಿ ಅಭಿವೃದ್ಧಿ ಕಾಣುವಿರಿ. ಹೊಸ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಮನೆಯಲ್ಲಿ ಶುಭ ಕಾರ್ಯ ನಡೆಸಲು ಸಿದ್ಧತೆ ನಡೆಸುವಿರಿ. ದೇವಾಲಯ ಸಂದರ್ಶನ ಯೋಗವಿದೆ.

ಕುಂಭ: ಧಾರ್ಮಿಕ ಕಾರ್ಯಗಳು ಅಂದುಕೊಂಡಂತೇ ನಿರ್ವಿಘ್ನವಾಗಿ ನೆರವೇರಲಿದೆ. ಮಾನಸಿಕವಾಗಿ ಆಲಸ್ಯತನ ಕಂಡುಬರುವುದು. ವೃತ್ತಿರಂಗದಲ್ಲಿ ಕೆಲಸ ಕಾರ್ಯಗಳಲ್ಲಿ ಉತ್ಸಾಹ ಕಳೆದುಕೊಳ್ಳುವಿರಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ತಾಳ್ಮೆಯಿರಲಿ.

ಮೀನ: ಆರ್ಥಿಕವಾಗಿ ಬೇಕಾದ ಸಮಯದಲ್ಲಿ ಹಣ ಕೈಗೆ ಸಿಗದೇ ಪರದಾಡುವ ಸ್ಥಿತಿ ಎದುರಾಗಲಿದೆ. ಸಂಗಾತಿಯ ಮಾತಿಗೆ ಬೆಲೆಕೊಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು.ಮಕ್ಕಳಿಂದ ಸಂತಸ ಸಿಗುವುದು. ನಿರುದ್ಯೋಗಿಗಳು ಬಂದ  ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ